Advertisement

ಸಿನಿಮಾ ಥಿಯೇಟರ್‌ಗೂ 100% ವಿನಾಯಿತಿ ನೀಡುವಂತೆ ವಾಣಿಜ್ಯ ಮಂಡಳಿ ಮನವಿ

04:21 PM Jan 29, 2022 | Team Udayavani |

ಬೆಂಗಳೂರು: ಕೋವಿಡ್ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಹಲವು ನಿಯಮಗಳನ್ನು ಸಡಿಲಿಕೆ ಮಾಡಿದೆ. ಜ.31ರ ಬಳಿಕ ನೈಟ್ ಕರ್ಫ್ಯೂ ರದ್ದು ಸೇರಿದಂತೆ ಹಲವಾರು ನಿಯಮಗಳುಳ್ಳ ಹೊಸ ಮಾರ್ಗಸೂಚಿಯನ್ನು ಸರ್ಕಾರ ಇಂದು ಪ್ರಕಟಿಸಿದೆ.

Advertisement

ಆದರೆ ಚಿತ್ರಮಂದಿರಗಳಿಗಿದ್ದ 50-50 ನಿಯಮವನ್ನು ಮುಂದುವರಿಸಲಾಗಿದೆ. ಹೀಗಾಗಿ ಇಂದು ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು.

ಸಿನಿಮಾ ಥಿಯೇಟರ್‌ಗೂ 100% ವಿನಾಯಿತಿ ನೀಡುವಂತೆ ಸಿಎಂ ಬೊಮ್ಮಾಯಿ‌ಗೆ ವಾಣಿಜ್ಯ ಮಂಡಳಿ ಮನವಿ ಪತ್ರ ಸಲ್ಲಿಸಿತು. ವಾಣಿಜ್ಯ ಮಂಡಳಿ ಸಭೆ ಬಳಿಕ ಸಿಎಂ ಬೊಮ್ಮಾಯಿ‌ ಆರ್ ಟಿ ನಗರ ನಿವಾಸಕ್ಕೆ ತೆರಳಿದರು. ಬಳಿಕ ಕಂದಾಯ ಸಚಿವ ಆರ್.ಅಶೋಕ್ ಅವರು ವಾಣಿಜ್ಯ ಮಂಡಳಿ ಸದಸ್ಯರ ಜೊತೆ ಚರ್ಚೆ ನಡೆಸಿದರು.

ಇದನ್ನೂ ಓದಿ:ಶಾಲಾರಂಭಕ್ಕೆ ಗ್ರೀನ್ ಸಿಗ್ನಲ್, ನೈಟ್ ಕರ್ಫ್ಯೂ ರದ್ದು: ಹೊಸ ನಿಯಮ ಪ್ರಕಟಿಸಿದ ರಾಜ್ಯ ಸರ್ಕಾರ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್, “ನಾವು ಸೋಮವಾರ ಮತ್ತೆ ಸಿಎಂ ಭೇಟಿ ಮಾಡುತ್ತೇವೆ. ಎಸ್ಒಪಿ ನಿಯಮಗಳ ಪಾಲನೆ ಮಾಡಿ ಚಿತ್ರಮಂದಿರ ನಡೆಸುತ್ತೇವೆ. ಇದರ ಬಗ್ಗೆ ಸಿಎಂಗೆ ಮಾಹಿತಿ ಕೊಡುತ್ತೇವೆ. ಚಿತ್ರಮಂದಿರಗಳ ಎಸಿ, ನಾನ್ ಎಸಿ ಮಾಹಿತಿ ಕೊಡುತ್ತೇವೆ. ಹಲವು ಚಿತ್ರಗಳು ಬಿಡುಗಡೆಗೆ ಕಾದಿವೆ. ಈಗಾಗಲೇ ಚಿತ್ರರಂಗಕ್ಕೆ ಸಾಕಷ್ಟು ನಷ್ಟವಾಗಿದೆ. ಮುಂದಿನ‌ ಶುಕ್ರವಾರ ಸರ್ಕಾರ ನಿರ್ಬಂಧ ತೆರವು ಮಾಡುವ ವಿಶ್ವಾಸವಿದೆ” ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next