Advertisement

ಮೈಸೂರಲ್ಲೇ ಚಿತ್ರ ನಗರಿ, ರಾಮನಗರದಲ್ಲಿ ಫಿಲ್ಮ್ ವಿವಿ

06:00 AM Dec 01, 2018 | Team Udayavani |

ಬೆಂಗಳೂರು: ಮೈಸೂರಿನಲ್ಲಿ ಚಿತ್ರನಗರಿ ಮತ್ತು ರಾಮನಗರದಲ್ಲಿ ಫಿಲ್ಮ್ ಯೂನಿವರ್ಸಿಟಿಯನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. ಈ ಮೂಲಕ ಚಿತ್ರ ನಗರಿಯನ್ನು ಮೈಸೂರಿನಿಂದ ರಾಮನಗರಕ್ಕೆ ಸ್ಥಳಾಂತರಿಸಲಾಗುತ್ತಿದೆ ಎಂಬ ವಿವಾದಕ್ಕೆ ತೆರೆ ಎಳೆದಿದ್ದಾರೆ.

Advertisement

ಅಂಬಿನಮನ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಮೈಸೂರಿನಲ್ಲಿ ಚಿತ್ರನಗರಿ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ನೂರಾರು ಎಕರೆ ಜಾಗ ನೀಡಿದ್ದಾರೆ. ಹೀಗಾಗಿ ಅಲ್ಲೇ ಚಿತ್ರನಗರಿ ಶುರು ಮಾಡುತ್ತೇವೆ. ಹಾಗೆಯೇ ಚಿತ್ರರಂಗಕ್ಕೆ ಬರುವ ಯುವಕರಿಗೆ ತಾಂತ್ರಿಕ ವಿಷಯವನ್ನು ಅಧ್ಯಯನ ಮಾಡಲು ಫಿಲ್ಮ್ ವಿಶ್ವವಿದ್ಯಾನಿಲಯ ಸ್ಥಾಪಿಸುತ್ತೇವೆ ಎಂದು ಹೇಳಿದರು. 

ಜತೆಗೆ ಚಿತ್ರರಂಗಕ್ಕೆ ಡಾ.ರಾಜಕುಮಾರ್‌, ಡಾ.ವಿಷ್ಣುವರ್ಧನ್‌ ಹಾಗು ಡಾ.ಅಂಬರೀಶ್‌ ಅವರ ಕೊಡುಗೆ ಅಪಾರ. ಹಾಗಾಗಿ, ಅವರ ಹೆಸರುಗಳ ಮೂಲಕ ಸಿನಿಮಾ ರಂಗಕ್ಕೆ ಹಲವು ಯೋಜನೆ ರೂಪಿಸುವುದಾಗಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next