Advertisement

* Film ತೋರಿಸಿ ಜೀವನ!: ಡಿಕೆಶಿ ವಿರುದ್ಧ ಎಚ್ ಡಿಕೆ ಪರೋಕ್ಷ ವಾಗ್ದಾಳಿ

06:55 PM Nov 19, 2023 | Team Udayavani |

ಚಿಕ್ಕಮಗಳೂರು : ‘ಟೆಂಟಲ್ಲಿ * ಫಿಲಂ ತೋರಿಸಿಕೊಂಡು ಜೀವನ ಮಾಡಿಕೊಂಡು ಬಂದವನು’ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಪರೋಕ್ಷವಾಗಿ ಏಕವಚನದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Advertisement

ಭಾನುವಾರ ಹನಿಡ್ಯೂ ರೆಸಾರ್ಟ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ”ದೊಡ್ಡ ಆಲದಹಳ್ಳಿಯ ಸಾತನೂರಿನಲ್ಲಿ 2 ಟೆಂಟ್ ಇದ್ದವಲ್ಲಾ, ನಾವು ಮಳಿಯಾಳಿ ಸಿನಿಮಾಗೆ ಕಟ್ಟಿಂಗ್ ಸೇರಿಸೋರಲ್ಲ, ನಾವು ಚಿಕ್ಕವರಿದ್ದಾಗ ಆ ಜೀವನ ಮಾಡಿಕೊಂಡು ಬಂದಿಲ್ಲ.ಆ ಮನಸ್ಥಿತಿಯಲ್ಲಿ ಅವನಿಗೆ ಇನ್ನೇನು ಬರುತ್ತದೆ. ಆ ತರ ಪೋಸ್ಟರ್ ಮಾಡಿಸೋದು ಬಿಟ್ಟು ದೇವರದ್ದು ಹಾಕಿಸುತ್ತಾನಾ? ಅದನ್ನೇ ಮುಂದುವರೆಸುತ್ತಿದ್ದಾರೆ, ಅವರು ಬಂದಿರುವುದೇ ಆ ಸಂಸ್ಕೃತಿಯಲ್ಲಿ.ಅಂತವರನ್ನ ಈ ರಾಜ್ಯದ ಜನ ಆಯ್ಕೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ಸೂ ಇಂದು ಅಂತವರಿಗೆ ಅಧಿಕಾರ ನೀಡಿದ್ದಾರೆ. ಅವರ ಜೀವನ, ಸಂಸ್ಕೃತಿ, ಬದುಕೇ ಅಷ್ಟು.ಏನು ಮಾಡೋದು” ಎಂದರು.

‘ಅವರಿಗೆ ಅವರ ಧರ್ಮದ ಬಗ್ಗೆ ಅಷ್ಟು ಅಭಿಮಾನ ಇದೆ. ನಮ್ಮ ಧರ್ಮದ ಧರ್ಮಾಭೀಮಾನಕ್ಕೆ ನಾನು ಭಯ ಪಡುತ್ತೇನಾ? ಹಾಕುವ ಸಮಯ ಬಂದರೆ ದತ್ತ ಮಾಲೆಯನ್ನೂ ಹಾಕುತ್ತೇನೆ. ಏಕೆ ಹಾಕಬಾರದು? ದೇವರ ಕಾರ್ಯಕ್ರಮ, ಹಾಕೋದು ಬಂದರೆ ಹಾಕುತ್ತೇನೆ. ಕಾನೂನು ಬಾಹಿರವಾಗಿ ಅಲ್ಲ ಯಾವುದನ್ನೂ ಮಾಡಲ್ಲ.ನಮ್ಮ ಸಂಸ್ಕೃತಿ ಉಳಿಸಲು ಕಾನೂನಾತ್ಮಕವಾಗಿ ಏನು ಬೇಕಾದರೂ ಮಾಡುತ್ತೇನೆ” ಎಂದರು.

”ಜಾತ್ಯತೀತತೆ ಅಂದರೆ ಏನು.? ಅಲ್ಲೆಲ್ಲೋ ಹೋಗಿ ನಿಮ್ಮ ಮಂತ್ರಿ ಮಾತನಾಡಿದ್ದಾರಲ್ಲ.ಜಾತ್ಯತೀತತೆ ಬಗ್ಗೆ ಚರ್ಚೆ ಮಾಡಲು ಕಾಂಗ್ರೆಸ್ಸಿಗರಿಗೆ ಯಾವ ಯೋಗ್ಯತೆ ಇದೆ” ಎಂದು ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next