Advertisement

ಗೋಹತ್ಯೆ ನಿಷೇಧ ಕಾಯ್ದೆ: ನ.15ರಂದು ಅಂತಿಮ ವಿಚಾರಣೆ

08:41 PM Sep 08, 2021 | Team Udayavani |

ಬೆಂಗಳೂರು: ಸರಕಾರ ಜಾರಿಗೆ ತಂದಿರುವ “ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆ-2020’ರ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಅಂತಿಮ ವಿಚಾರಣೆಯನ್ನು ಹೈಕೋರ್ಟ್‌ ನ.15ಕ್ಕೆ ನಿಗದಿಪಡಿಸಲಾಗಿದೆ.

Advertisement

ಕಾಯ್ದೆಯನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಆರೀಫ್ ಜಮೀಲ್‌, ಕೆಲವು ಕಸಾಯಿ ಖಾನೆ ಮಾಲಕರು ಮತ್ತು ಗೋಮಾಂಸ ಮಾರಾಟಗಾರರು ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಹಂಗಾಮಿ ಮುಖ್ಯ ನ್ಯಾ| ಸತೀಶ್‌ ಚಂದ್ರ ಶರ್ಮ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದ್ದಿದವು.

ಈ ವೇಳೆ ಸರಕಾರದ ಪರ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಹಾಜರಾಗಿ, ಅರ್ಜಿಗಳ ಅಂತಿಮ ವಿಚಾರಣೆಗೆ ದಿನಾಂಕವನ್ನು ಸೆ.8ರಂದು ನಿಗದಿಪಡಿಸಲಾಗುವುದು ಎಂದು ಆ.26ರಂದು ಹೈಕೋರ್ಟ್‌ ತಿಳಿಸಿತ್ತು. ಅದರಂತೆ ಅರ್ಜಿಗಳನ್ನು ಅಂತಿಮ ವಿಚಾರಣೆಗೆ ನಿಗದಿಪಡಿಸಬೇಕಿದೆ ಎಂದು ತಿಳಿಸಿದರು.

ಇದನ್ನೂ ಓದಿ:ಜೆಡಿಎಸ್‌ ಬೆಂಬಲ ಕೋರಿಕೆ, ಸಿದ್ದರಾಮಯ್ಯ ಅಸಮಾಧಾನ?

ಆಗ ಮಧ್ಯಂತರ ಅರ್ಜಿದಾರರೊಬ್ಬರ ಪರ ವಕೀಲರು, ಕಾಯ್ದೆಯನ್ನು ಜಾರಿ ಮಾಡಲು ನಿರ್ದೇಶಿಸಲು ಕೋರಿ ಮಧ್ಯಂತರ ಅರ್ಜಿ ಸಲ್ಲಿಸಲಾಗಿದೆ. ಅದನ್ನು ವಿಚಾರಣೆಗೆ ಪರಿಗಣಿಸಬೇಕು ಎಂದು ಕೋರಿದರು.

Advertisement

ಅದಕ್ಕೆ ಅಡ್ವೋಕೇಟ್‌ ಜನರಲ್‌ ಪ್ರತಿಕ್ರಿಯಿಸಿ, ಎಲ್ಲಾ ಅರ್ಜಿಗಳು ಮತ್ತು ಮಧ್ಯಂತರ ಅರ್ಜಿಗಳನ್ನು ಒಟ್ಟಿಗೆ ವಿಚಾರಣೆ ಮಾಡಲಾಗುವುದು ಎಂದು ಹೈಕೋರ್ಟ್‌ ಈ ಹಿಂದೆ ಸ್ಪಷ್ಟಪಡಿಸಿತ್ತು ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಅದಕ್ಕೆ ಒಪ್ಪಿದ ನ್ಯಾಯಪೀಠ, ಎಲ್ಲಾ ಅರ್ಜಿಗಳ ಅಂತಿಮ ವಿಚಾರಣೆಯನ್ನು ನ.15ಕ್ಕೆ ನಿಗದಿಪಡಿಸಿ ವಿಚಾರಣೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next