Advertisement

ಧರ್ಮೇಗೌಡ ಆತ್ಮಹತ್ಯೆ ಪ್ರಕರಣ: ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಅಂತಮ ದರ್ಶನಕ್ಕೆ ವ್ಯವಸ್ಥೆ

02:08 PM Dec 29, 2020 | keerthan |

ಶಿವಮೊಗ್ಗ: ಚಿಕ್ಕಮಗಳೂರಿನ ಕಡೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಪರಿಷತ್ ಉಪ ಸಭಾಪತಿ ಧರ್ಮೇಗೌಡ ಅವರ ಅಂತಿಮ ದರ್ಶನಕ್ಕೆ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಯ ಶವಾಗಾರದ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ.

Advertisement

ಮೆಗ್ಗಾನ್ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಇದೀಗ ಮುಕ್ತಾಯವಾಗಿದೆ. ಶವಾಗಾರದ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ:ಧರ್ಮರಾಯನನ್ನು ಕಳೆದುಕೊಂಡೆ, ಕೊಲೆ ಮಾಡಿದಂತಹ ರಾಜಕೀಯ ವ್ಯವಸ್ಥೆ ಇದು: ಕುಮಾರಸ್ವಾಮಿ

ಶಿವಮೊಗ್ಗ ಜಿಲ್ಲಾಡಳಿತದಿಂದ ನಿಧನ ಹೊಂದಿದ ಉಪ ಸಭಾಪತಿಗೆ ಸರಕಾರಿ ಗೌರವ ಸಲ್ಲಿಕೆಗೆ ಸಿದ್ಧತೆ ನಡೆಸಲಾಗುತ್ತಿದೆ.  ರಾಷ್ಟ್ರಧ್ವಜ ಹೊದಿಸಿ ಸರ್ಕಾರಿ ಗೌರವ ಸಲ್ಲಿಸಲಾಗುತ್ತದೆ. ಬಳಿಕ ಧರ್ಮೇಗೌಡ ಅವರ ಹುಟ್ಟೂರಿಗೆ ಪಾರ್ಥಿವ ಶರೀರ ರವಾನೆ ಮಾಡಲಾಗುತ್ತದೆ.

ಇದನ್ನೂ ಓದಿ: ಸರಪನಹಳ್ಳಿ ಗ್ರಾ.ಪಂಚಾಯತಿಯಿಂದ ಉಪ ಸಭಾಪತಿಯವರೆಗೆ.. ಎಸ್.ಎಲ್. ಧರ್ಮೇಗೌಡ ರಾಜಕೀಯ ಹಾದಿ

Advertisement
Advertisement

Udayavani is now on Telegram. Click here to join our channel and stay updated with the latest news.

Next