Advertisement

ಕೊನೆಗೂ ಮೈತ್ರಿ ಸಂಪುಟ ವಿಸ್ತರಣೆಗೆ ಡೇಟ್‌ ಫಿಕ್ಸ್‌

10:05 AM Jun 09, 2019 | Vishnu Das |

ಬೆಂಗಳೂರು: ಹಲವರ ಅಸಮಾಧಾನಗಳ ನಡುವೆ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ಕೊನೆಗೂ ಸಂಪುಟ ವಿಸ್ತರಣೆ ನಡೆಸಲು ದಿನಾಂಕ ನಿಗದಿ ಮಾಡಿದೆ. ಜೂನ್‌ 12 ರ ಬುಧವಾರ ಬೆಳಗ್ಗೆ 11.30 ಕ್ಕೆ ಮೂವರು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಸಂಪುಟ ಸೇರ್ಪಡೆಯಾಗಲಿದ್ದಾರೆ.

Advertisement

ಇಬ್ಬರು ಪಕ್ಷೇತರ ಶಾಸಕರು ಮತ್ತು ಓರ್ವ ಕಾಂಗ್ರೆಸ್‌ ಶಾಸಕರಿಗೆ ಸಚಿವ ಸ್ಥಾನ ನೀಡಲಾಗುತ್ತಿದೆ.

ರಾಣೆಬೆನ್ನೂರು ಶಾಸಕ ಆರ್‌.ಶಂಕರ್‌, ಮುಳಬಾಗಿಲು ಶಾಸಕ ನಾಗೇಶ್‌ ಮತ್ತೆ ಸಚಿವರಾಗಿ ಪ್ರಮಾಣ ಸ್ವೀಕರಿಸುವುದು ಖಚಿತವಾಗಿದೆ.

ಕಾಂಗ್ರೆಸ್‌ ಕೋಟಾದಲ್ಲಿ ಹಿರಿಯ ಶಾಸಕ ರಾಮಲಿಂಗಾ ರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆಗಳಿವೆ.

ಹಿರಿಯ ಕಾಂಗ್ರೆಸ್‌ ಶಾಸಕ ಬಿ.ಸಿ.ಪಾಟೀಲ್‌ ಅವರು ನನಗೆ ಈಗ ಕೊಟ್ಟರೂ ಸಚಿವ ಸ್ಥಾನ ಬೇಡ ಎಂದು ಮಾಧ್ಯಮಗಳ ಮುಂದೆ ಅಸಮಾಧಾನ ಹೊರ ಹಾಕಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next