Advertisement

ಹೆಚ್ಚುವರಿ ಅನುದಾನ ಪ್ರಸ್ತಾವಕ್ಕೆ ಆರ್ಥಿಕ ಇಲಾಖೆ ಒಪ್ಪಿಲ್ಲ: ಸಚಿವ ಎಸ್‌. ಅಂಗಾರ

09:51 PM Feb 20, 2023 | Team Udayavani |

ಬೆಂಗಳೂರು: ಬೈಂದೂರು ವಿಧಾನಸಭಾ ಕ್ಷೇತ್ರವೂ ಸೇರಿದಂತೆ ಉಡುಪಿ ಜಿಲ್ಲೆಯಲ್ಲಿ ಸಮುದ್ರ ಕೊರೆತದಿಂದ ಉಂಟಾದ ಹಾನಿ ತಡೆಗಟ್ಟಲು ತಡೆಗೋಡೆಗೆ ಹೆಚ್ಚುವರಿ ಅನುದಾನದ ಪ್ರಸ್ತಾವಕ್ಕೆ ಆರ್ಥಿಕ ಇಲಾಖೆ ಒಪ್ಪಿರುವುದಿಲ್ಲ ಎಂದು ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್‌. ಅಂಗಾರ ತಿಳಿಸಿದ್ದಾರೆ.

Advertisement

ಬೈಂದೂರು ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿ, ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1.25 ಕೋಟಿ ರೂ. ವೆಚ್ಚದಲ್ಲಿ ಮರವಂತೆ, ನಾಗಬನ ಮತ್ತು ಉತ್ತರ ಬದಿಯ ಬ್ರೇಕ್‌ ವಾಟರ್‌ ರಸ್ತೆ ಪುನರ್‌ ನಿರ್ಮಾಣಕ್ಕೆ ಎಸ್‌ಡಿಆರ್‌ಎಫ್ ನಿಧಿಯಲ್ಲಿ ಅನುಮೋದನೆ ದೊರಕಿದ್ದು, ಕಾಮಗಾರಿ ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

 

 

Advertisement

Udayavani is now on Telegram. Click here to join our channel and stay updated with the latest news.

Next