Advertisement

Terrorism: ಉಗ್ರರಿಗೆ ಆರ್ಥಿಕ ನೆರವು: ಕಾಶ್ಮೀರದಲ್ಲಿ ವ್ಯಕ್ತಿ ಸೆರೆ

08:19 PM Feb 08, 2024 | Team Udayavani |

ಶ್ರೀನಗರ: ಪಾಕಿಸ್ತಾನದಲ್ಲಿ ಎಂಬಿಬಿಎಸ್‌ ಪ್ರವೇಶಾತಿ ಒದಗಿಸಲು, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ, ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬನನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ. ಕುಪ್ವಾರ ನಿವಾಸಿ ಮೊಹಮ್ಮದ್‌ ಅಬ್ದುಲ್ಲಾ ಶಾ ಬಂಧಿತ ಆರೋಪಿ. ಜಮ್ಮು ಮತ್ತು ಕಾಶ್ಮೀರದ ವಿದ್ಯಾರ್ಥಿಗಳಿಗೆ ಪಾಕಿಸ್ತಾನದ ಕಾಲೇಜುಗಳಲ್ಲಿ ಎಂಬಿಬಿಎಸ್‌ ಸೇರಿದಂತೆ ಇತರೆ ಕೋರ್ಸ್‌ಗಳಿಗೆ ಪ್ರವೇಶಾತಿ ಕಲ್ಪಿಸಲು, ಪಾಕಿಸ್ತಾನಿ ಹ್ಯಾಂಡ್ಲರ್‌ ಮನ್ಸೂರ್‌ ಅಹ್ಮದ್‌ ಶಾ ನೊಂದಿಗೆ ಆರೋಪಿ ಮೊಹಮ್ಮದ್‌ ಅಬ್ದುಲ್ಲಾ ಶಾ ಕೈಜೋಡಿಸಿದ್ದ.

Advertisement

ಇದರಿಂದ ಬಂದ ಹಣವನ್ನು ಭಯೋತ್ಪಾದಕ ಚಟುವಟಿಕೆಗಳಿಗೆ ಬಳಸಲಾಗುತ್ತಿತ್ತು. ಆರೋಪಿ ಅಬ್ದುಲ್ಲಾ ಶಾನನ್ನು ಶ್ರೀನಗರ ವಿಶೇಷ ಕೋರ್ಟ್‌ಗೆ ಹಾಜರುಪಡಿಸಿದ್ದು, ಫೆ.13ರ ವರೆಗೆ ಇಡಿ ವಶಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next