Advertisement

ಸಾಹಿತಿ-ಕಲಾವಿದರಿಗೆ ಆರ್ಥಿಕ ನೆರವು

01:56 PM Apr 23, 2020 | Suhan S |

ಧಾರವಾಡ: ಕೋವಿಡ್‌-19 ಕೋವಿಡ್ 19 ನಿಯಂತ್ರಣಕ್ಕೆ ಲಾಕ್‌ಡೌನ್‌ ಜಾರಿಯಲ್ಲಿರುವುದರಿಂದ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅಶಕ್ತ ಕಲಾವಿದರು, ಸಾಹಿತಿಗಳಿಗೆ ಆರ್ಥಿಕ ಸಹಾಯ ಮಾಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅರ್ಜಿ ಆಹ್ವಾನಿಸಿದೆ.

Advertisement

ಎಲ್ಲಾ ಕಲಾ ಪ್ರಕಾರದ ಕಲಾವಿದರು, ಸಾಹಿತಿಗಳು 10 ವರ್ಷ ಈ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರಬೇಕು. ವೃತ್ತಿನಿರತರ ಕಲಾವಿದರಾಗಿದ್ದು, ಆರ್ಥಿಕವಾಗಿ ಸಂಕಷ್ಟದಲ್ಲಿ ಇರುವವರಾಗಿರಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಸಾಶನ ಪಡೆಯುತ್ತಿರುವವರು ಇದಕ್ಕೆ ಅರ್ಹರಿರಲ್ಲ. ಸರ್ಕಾರಿ ನೌಕರರಾಗಿರಬಾರದು. ರಾಜ್ಯ, ಕೇಂದ್ರ, ನಿಗಮ ಮಂಡಳಿ, ಸರ್ಕಾರಿ ಅನುದಾನಿತ ಸಂಸ್ಥೆಗಳು ಮತ್ತು ಅರೆ ಸರ್ಕಾರಿ ಸಂಸ್ಥೆಗಳ ನೌಕರರಾಗಿರಬಾರದು. ಅರ್ಹ ಕಲಾವಿದರು, ಸಾಹಿತಿಗಳು ತಮ್ಮ ಹೆಸರು, ವಿಳಾಸ, ಆಧಾರ ಸಂಖ್ಯೆ, ದೂರವಾಣಿ ಸಂಖ್ಯೆ ಮತ್ತು ಬ್ಯಾಂಕ್‌ ವಿವರಗಳೊಂದಿಗೆ ಮಾಹಿತಿಯನ್ನು ಧಾರವಾಡ ಸಹಾಯಕರ ನಿರ್ದೇಶಕರ ಕಚೇರಿಯ ವೆಬ್‌ಸೈಟ್‌ kannadaculturedwd@gmail. Com ಮತ್ತು ದೂ: 0836-2442909 ಮುಖಾಂತರ ಇಲ್ಲವೇ ಖುದ್ದಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು ಇಲಾಖೆಗೆ ಸ್ವವಿವರ ತಲುಪಿಸಬೇಕು. ತಪ್ಪು ಅಥವಾ ಸುಳ್ಳು ಮಾಹಿತಿ ನೀಡಿ ಇದರ ಲಾಭ ಪಡೆಯಲು ಯತ್ನಿಸುವವರ ಮೇಲೆ ವಿಪತ್ತು ನಿರ್ವಹಣಾ ಅಧಿನಿಯಮದನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next