Advertisement

Udupi; ಗರುಡ ಗ್ಯಾಂಗ್ ಗೆ ಹಣಕಾಸಿನ ನೆರವು; ಉಪ್ಪಿನಂಗಡಿಯ ಯುವತಿ ಬಂಧನ

12:04 PM Jul 12, 2024 | Team Udayavani |

ಉಡುಪಿ: ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಆರೋಪಿಯೊಬ್ಬನ ಆಪ್ತ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

Advertisement

ಬಂಧಿತ ಆರೋಪಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕರ್ವೇಲು, ಬಾನೊಟ್ಟು ನಿವಾಸಿ ಝಕರಿಯಾ ಪತ್ನಿ ಸಫಾರ ಯಾನೆ ಸಾಜಿದ (21) ಎಂದು ಗುರುತಿಸಲಾಗಿದೆ.

ಗರುಡ ಗ್ಯಾಂಗ್‌ ಸದಸ್ಯರಿಗೆ ಸಫಾರ ಆರ್ಥಿಕ ನೆರವು ಮತ್ತು ಆಶ್ರಯ ವ್ಯವಸ್ಥೆ ಮಾಡಿದ್ದಳು. ಗ್ಯಾಂಗ್ ಸದಸ್ಯರಿಗೆ ಮೊಬೈಲ್‌ ಫೋನ್ ನೀಡಿ ಹಣ ವರ್ಗಾವಣೆ ಮಾಡಿರುವ ಆರೋಪವೂ ಸಫಾರ ಯಾನೆ ಸಾಜಿದ ಮೇಲಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ತಿಳಿಸಿದ್ದಾರೆ.

ಸದ್ಯ ಸಫಾರ ಯಾನೆ ಸಾಜಿದಯನ್ನು ಮಂಗಳೂರಿನ ಕಾರಾಗೃಹದಲ್ಲಿ ಇರಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next