Advertisement

ತೇಜಸ್ವಿ ಸೂರ್ಯ ಭೇಟಿ ವೇಳೆ ಗಲಭೆ: ಎಫ್ಐಆರ್‌ ದಾಖಲು

07:54 PM Aug 11, 2022 | Team Udayavani |

ಉಜ್ಜೈನ್‌: ಮಧ್ಯಪ್ರದೇಶದ ಉಜ್ಜೈ ನಿಯಲ್ಲಿರುವ ಮಹಾಕಾಳೇಶ್ವರ ದೇಗುಲಕ್ಕೆ ಬಿಜೆಪಿಯ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಬುಧವಾರ ಭೇಟಿ ನೀಡಿದ್ದಾಗ ನಡೆದಿದ್ದ ವಾಗ್ವಾದ ಹಾಗೂ ಉದ್ವಿಗ್ನ ವಾತಾವರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಎಫ್ಐಆರ್‌ ದಾಖಲಿಸಲಾಗಿದೆ.

Advertisement

ಆದರೆ, ಯಾರನ್ನೂ ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರದಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ದೇಗುಲಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ದೇಗುಲ ಪ್ರವೇಶಕ್ಕೆ ಮುಂದಾಗಿದ್ದರು. ಆಗ, ಅವರನ್ನು ದೇಗುಲದ ದ್ವಾರಪಾಲಕರು ದೇಗುಲದ ಮಹಾದ್ವಾರದಲ್ಲಿ ತಡೆದಾಗ ವಾಗ್ವಾದ ಏರ್ಪಟ್ಟಿತ್ತು.

Advertisement

Udayavani is now on Telegram. Click here to join our channel and stay updated with the latest news.

Next