Advertisement

BJP ಅಮಿತ್ ಮಾಳವೀಯ ವಿರುದ್ಧ ಎಫ್‌ಐಆರ್; ಹೈಕೋರ್ಟ್ ನಿಂದ ಮಧ್ಯಂತರ ತಡೆಯಾಜ್ಞೆ

08:30 PM Jul 19, 2023 | Team Udayavani |

ಬೆಂಗಳೂರು: ಬಿಜೆಪಿ ನಾಯಕ, ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ದ್ವೇಷವನ್ನು ಉತ್ತೇಜಿಸುವ ಆಪಾದಿತ ಟ್ವೀಟ್‌ಗೆ ಸಂಬಂಧಿಸಿದಂತೆ ತನಿಖೆ ಮತ್ತು ಎಲ್ಲಾ ಮುಂದಿನ ಪ್ರಕ್ರಿಯೆಗಳಿಗೆ ಕರ್ನಾಟಕ ಹೈಕೋರ್ಟ್ ಬುಧವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

Advertisement

ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ತಡೆಯಾಜ್ಞೆ ನೀಡಿ, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಸಂಸದ ಹಾಗೂ ವಕೀಲ ತೇಜಸ್ವಿ ಸೂರ್ಯ ಮಾಳವೀಯ ಪರ ವಾದ ಮಂಡಿಸಿದರು, ಸರ್ಕಾರದ ವಿಶೇಷ ವಕೀಲ ಬಿ.ಎ.ಬೆಳ್ಳಿಯಪ್ಪ ಎದುರು ಪಕ್ಷವನ್ನು ಪ್ರತಿನಿಧಿಸಿದ್ದರು.

ಸುದ್ದಿಗಾರರೊಂದಿಗೆ ಮಾತನಾಡಿದ  ತೇಜಸ್ವಿ ಸೂರ್ಯ ”ರಾಹುಲ್ ಗಾಂಧಿ ಅವರ ವಿರುದ್ಧವಾಗಿದೆ ಎಂದು ಹೇಳಲಾದ ಟ್ವೀಟ್ ಕುರಿತಾದ ದೂರು ಮತ್ತು ಎಫ್‌ಐಆರ್ ಐಪಿಸಿ 153 ಎ, 505 (2) ರ ನಿಬಂಧನೆಗಳ ಯಾವುದೇ ಆರೋಪಗಳನ್ನು ಉಲ್ಲೇಖಿಸಿಲ್ಲ, ಎಫ್‌ಐಆರ್, ದೂರು ಮತ್ತು ಅದರಲ್ಲಿರುವ ಆರೋಪಗಳನ್ನು ಯಾವುದೇ ಸಂದರ್ಭದಲ್ಲಿ ಮಾಡಲಾಗಿಲ್ಲ ಎಂದು ಹೇಳಲಾಗಿದೆ. ಈ ಆದೇಶವು ತನ್ನ ರಾಜಕೀಯ ಕಾರ್ಯಸೂಚಿಯನ್ನು ಪೂರೈಸಲು ಸರ್ಕಾರದ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್ ಸರ್ಕಾರದಕ್ಕೆ ಕಪಾಳಮೋಕ್ಷವಾಗಿದೆ” ಎಂದು ಹೇಳಿದರು.

ಮಾಳವೀಯ ಅವರು ಕಳೆದ ತಿಂಗಳು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅನಿಮೇಟೆಡ್ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next