Advertisement

Maharashtra: ಮಾಜಿ ಸಚಿವ ಆದಿತ್ಯ ಠಾಕ್ರೆ ವಿರುದ್ಧ ಎಫ್ಐಆರ್‌

08:21 PM Nov 18, 2023 | Team Udayavani |

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಮಾಜಿ ಸಿಎಂ ಉದ್ಧವ್‌ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ ವಿರುದ್ಧ ಮುಂಬೈ ಪೊಲೀಸರು ಎಫ್ಐಆರ್‌ ದಾಖಲಿಸಿದ್ದಾರೆ. ವಾಣಿಜ್ಯ ನಗರಿಯ ಲೋವರ್‌ ಪರೇಲ್‌ನಲ್ಲಿ ಕಾಮಗಾರಿ ಮುಕ್ತಾಯಗೊಂಡ ಸೇತುವೆಯನ್ನು ಬೃಹನ್ಮುಂಬೈ ಮಹಾನಗರ ಪಾಲಿಕೆಯ ಅನುಮತಿ ಇಲ್ಲದೆ ಉದ್ಘಾಟಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

Advertisement

ಮಾಜಿ ಸಚಿವ ಆದಿತ್ಯ ಠಾಕ್ರೆ ವಿರುದ್ಧ ಪಾಲಿಕೆ ಅಧಿಕಾರಿಗಳು ದೂರು ನೀಡಿದ್ದಾರೆ. ಸೇತುವೆ ನಿರ್ಮಾಣಗೊಂಡ ಸ್ಥಳ ಆದಿತ್ಯ ಠಾಕ್ರೆ ಶಾಸಕರಾಗಿರುವ ವರ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಬರುತ್ತದೆ. ಸಿಎಂ ಏಕನಾಥ ಶಿಂಧೆಯವರೇ ಅದನ್ನು ಉದ್ಘಾಟಿಸಬೇಕಾಗಿತ್ತು. ಈ ಬಗ್ಗೆ ಮಾತನಾಡಿದ ಅವರು, ಸೇತುವೆ ಉದ್ಘಾಟಿಸಲು ಸಿಎಂಗೆ ಸಮಯ ಇಲ್ಲ. 15 ದಿನಗಳ ಹಿಂದೆಯೇ ಕಾಮಗಾರಿ ಪೂರ್ತಿಯಾಗಿದೆ ಎಂದು ದೂರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next