Advertisement

RSS ವಿರುದ್ಧ ಹೇಳಿಕೆ : ಜಾವೇದ್ ಅಖ್ತರ್ ವಿರುದ್ಧ ಎಫ್‍ಐಆರ್

08:04 PM Oct 04, 2021 | Team Udayavani |

ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್ಎಸ್‌) ವಿರುದ್ಧ ಹೇಳಿಕೆ ನೀಡಿರುವ ಆರೋಪದ ಮೇರೆಗೆ ಬಾಲಿವುಡ್‌ನ ಗೀತೆ ರಚನೆಕಾರ ಜಾವೇದ್ ಅಖ್ತರ್ ಅವರ ವಿರುದ್ಧ ವಕೀಲ ವಕೀಲ ಸಂತೋಷ್ ದುಬೆ ಪೊಲೀಸ್ ಠಾಣೆಯೊಂದರಲ್ಲಿ ಸೋಮವಾರ ದೂರು ದಾಖಲಿಸಿದ್ದಾರೆ.

Advertisement

ಸಂತೋಷ್ ದುಬೆ ನೀಡಿದ ದೂರಿನ ಆಧಾರದ ಮೇಲೆ ಮುಲುಂಡ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 500 ( ಮಾನನಷ್ಟಕ್ಕಾಗಿ ಶಿಕ್ಷೆ) ಅಡಿಯಲ್ಲಿ ಎಫ್ ಐಆರ್ ದಾಖಲಾಗಿರುವುದಾಗಿ ಮುಲುಂಡ್ ಠಾಣೆಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

ವಾಹಿನಿಯೊಂದರ ಸಂದರ್ಶನವೊಂದರಲ್ಲಿ ಜಾವೇದ್ ಅಖ್ತರ್ ಅವರು ಆರ್‌ಎಸ್‌ಎಸ್‌ ವಿರುದ್ಧ ಸುಳ್ಳು ಮತ್ತು ಮಾನಹಾನಿಕರ ಟೀಕೆಗಳನ್ನು ಮಾಡಿದ್ದಾರೆ ಎಂದು ಆರೋಪಿಸಿ ಅವರಿಗೆ ವಕೀಲ ದುಬೆ ನೋಟಿಸ್ ನೀಡಿದ್ದರು. ಸಂದರ್ಶನದಲ್ಲಿ ಜಾವೇದ್ ಅವರು ತಾಲಿಬಾನ್ ಮತ್ತು ಹಿಂದೂ ತೀವ್ರಗಾಮಿಗಳ ನಡುವೆ ಇರುವ ಸಾಮ್ಯತೆಗಳ ಬಗ್ಗೆಯೂ ಮಾತನಾಡಿದ್ದರು. ಈ ಕುರಿತು ಅವರು ಕ್ಷಮೆಯಾಚಿಸುವಂತೆಯೂ ನೋಟಿಸ್‌ನಲ್ಲಿ ಒತ್ತಾಯಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next