Advertisement

R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

09:46 PM Sep 18, 2024 | Team Udayavani |

ಮಂಡ್ಯ: ವಿಪಕ್ಷ ನಾಯಕ ಆರ್‌. ಅಶೋಕ್‌ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ನಾಗಮಂಗಲ ಟೌನ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

Advertisement

ಆರ್‌.ಅಶೋಕ್‌ ಹಾಗೂ ಶೋಭಾ ಕರಂದ್ಲಾಜೆ ಅವರ ಎಕ್ಸ್‌ ಖಾತೆಯಲ್ಲಿ ಎಲ್ಲಿಯೋ ನಡೆದಿರುವ ವೀಡಿಯೊಗಳನ್ನು ಅಪ್‌ ಲೋಡ್‌ ಮಾಡುವ ಮೂಲಕ ನಾಗಮಂಗಲದಲ್ಲಿ ನಡೆದಿದೆ ಎಂದು ಆರೋಪಿಸಲಾಗಿದೆ.

ಇದು ಶಾಂತವಾಗಿರುವ ನಾಗಮಂಗಲದಲ್ಲಿ ಮತ್ತೆ ಕೋಮುಗಲಭೆಗೆ ಪ್ರಚೋದನೆ ನೀಡುವ ಉದ್ದೇಶದಿಂದ ಒಂದಕ್ಕೊಂದು ಸಂಬಂಧ ಕಲ್ಪಿಸಿ ಸಾರ್ವಜನಿಕರಿಗೆ ತಪ್ಪು ಸಂದೇಶ ರವಾನಿಸಿ ಪ್ರಚೋದನೆ ನೀಡಲು ಪೋಸ್ಟ್‌ ಮಾಡಿರುವುದು ಕಂಡು ಬಂದಿದೆ ಎಂದು ಪೊಲೀಸ್‌ ಅಧಿಕಾರಿ ರಮೇಶ್‌ ನೀಡಿರುವ ವರದಿ ಆಧಾರದ ಮೇಲೆ ಇಬ್ಬರ ಮೇಲೆ ಎಫ್‌ಐಆರ್‌ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next