Advertisement

ಚಿಕ್ಕಮಗಳೂರು: ಆಕಸ್ಮಿಕ ಬೆಂಕಿ ತಗುಲಿ ಎರಡು ಹಸುಗಳ ಸಜೀವ ದಹನ

03:51 PM Sep 28, 2022 | Team Udayavani |

ಚಿಕ್ಕಮಗಳೂರು: ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಎರಡು ಹಸುಗಳು ಜೀವಂತ ಸುಟ್ಟು ಹೋಗಿರುವ ಘಟನೆ ಜಿಲ್ಲೆಯ ಅಜ್ಜಂಪುರ ತಾಲೂಕಿನ ಶಿವನಿ ಸಮೀಪದ ಗಡಿರಂಗಾಪುರ ಗ್ರಾಮದಲ್ಲಿ ನಡೆದಿದೆ.

Advertisement

ಮೂರ್ತಿ ಎಂಬವರಿಗೆ ಸೇರಿದ ಈ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಎರಡು ಹಸುಗಳು ಸಜೀವ ದಹನವಾಗಿದೆ. ಮತ್ತೆರಡು ದೊಡ್ಡ ಹಸುಗಳು ಓಡಿ ಹೋಗಿ ಜೀವ ಉಳಿಸಿಕೊಂಡಿವೆ.

ದುಷ್ಕರ್ಮಿಗಳು ಈ ಕೊಟ್ಟಿಗೆಗೆ ಬೆಂಕಿ ಹಾಕಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ನಾಲ್ಲೈದು ದಿನದಿಂದ ಆ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ತಿಳಿದು ಬಂದಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next