Advertisement

ಕೆದೂರು: ಹತ್ತು ಎಕರೆ ಜಾಗದಲ್ಲಿ ಅಗ್ನಿ ಅವಘಡ

01:13 PM Feb 07, 2021 | Team Udayavani |

ತೆಕ್ಕಟ್ಟೆ: ಕುಂದಾಪುರ ತಾಲೂಕಿನ ಕೆದೂರು ಗ್ರಾಮದಲ್ಲಿ ಸುಮಾರು ಹತ್ತು ಎಕರೆ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ರವಿವಾರ ಬೆಳಗ್ಗೆ ನಡೆದಿದೆ.

Advertisement

ಟ್ರಾನ್ಸ್ ಫಾರ್ಮರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ಘಟನೆ ನಡೆದಿದೆ ಎನ್ನಲಾಗಿದೆ. ಸುಮಾರು ಹತ್ತು ಎಕರೆಯಷ್ಟು ಜಾಗದಲ್ಲಿ ಬೆಂಕಿ ಹರಡಿತ್ತು. ಸುಮಾರು 50ಕ್ಕೂ ಹೆಚ್ಚು ಸ್ಥಳೀಯ ಯುವಕರು ಸೇರಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

ಇದನ್ನೂ ಓದಿ:ಬೆಟ್ಟದಲ್ಲಿ  ಬೆಂಕಿ : ಚಿರತೆಗೆ ಹೆದರಿ ಜಾಗರಣೆ

ಘಟನೆ ನಡೆದ ಸ್ಥಳದ ಹತ್ತಿರ ಪ್ರೌಢ ಶಾಲೆ, ವಿದ್ಯಾರ್ಥಿ ನಿಲಯ, ಸುಮಾರು 50 ಮನೆಗಳಿವೆ. ಸ್ಥಳೀಯರು ಸಮಯಪ್ರಜ್ಞೆ ತೋರಿ ಕೂಡಲೇ ಬೆಂಕಿ ನಂದಿಸಿದ್ದರಿಂದ ಸಂಭವನೀಯ ಅನಾಹುತವೊಂದು ತಪ್ಪಿದೆ.

Advertisement

ಅಗ್ನಿಶಾಮಕ ದಳ ಸಿಬ್ಬಂದಿಗೆ ತರಾಟೆ

ಘಟನೆಯ ಬಗ್ಗೆ ಮಾಹಿತಿ ನೀಡಿದರೂ ಸುಮಾರು ಎರಡು ಗಂಟೆ ತಡವಾಗಿ ಆಗಮಿಸಿದ ಕುಂದಾಪುರ ಅಗ್ನಿಶಾಮಕ ದಳ ಸಿಬ್ಬಂದಿಯನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡರು.

Advertisement

Udayavani is now on Telegram. Click here to join our channel and stay updated with the latest news.

Next