Advertisement

ದಿಲ್ಲಿ ವಸತಿ ಕಟ್ಟಡದಲ್ಲಿ ಬೆಂಕಿ; ನೂರು ನಿವಾಸಿಗಳ ರಕ್ಷಣೆ, ಸಾವು, ನೋವು ಇಲ್ಲ

09:15 AM Jun 21, 2019 | Team Udayavani |

ಹೊಸದಿಲ್ಲಿ : ವಾಯವ್ಯ ದಿಲ್ಲಿಯ ಪೀತಾಂಪುರದಲ್ಲಿನ 10 ಅಂತಸ್ತಿನ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ನೂರು ನಿವಾಸಿಗಳನ್ನು ಸುರಕ್ಷಿತವಾಗಿ ಪಾರು ಮಾಡಲಾಗಿದೆ ಎಂದು ಅಗ್ನಿ ಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ನಿನ್ನೆ ಬುಧವಾರ ತಡರಾತ್ರಿ ಸಂಭವಿಸಿದ್ದ ಈ ಅಗ್ನಿ ಅವಘಡದಲ್ಲಿ ಯಾರೊಬ್ಬರೂ ಗಾಯಗೊಂಡಿಲ್ಲ. ಆದರೂ ಕೆಲವರಿಗೆ ದಟ್ಟ ಹೊಗೆಯಿಂದಾಗಿ ಉಸಿರುಗಟ್ಟಿದ ಸ್ಥಿತಿ ಉಂಟಾಗಿ ಅವರನ್ನು ಸಕಾಲದಲ್ಲಿ ರಕ್ಷಿಸಲಾಯಿತು ಎಂದು ಅಗ್ನಿ ಶಾಮಕ ದಳ ಅಧಿಕಾರಿ ಅತುಲ್‌ ಗರ್ಗ್‌ ತಿಳಿಸಿದ್ದಾರೆ.

ನಸುಕಿನ 1 ಗಂಟೆಯ ಸುಮಾರಿಗೆ ಕಟ್ಟಡದ ಐದನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅನಂತರ ಅದು ಇತರ ಮಹಡಿಗಳಿಗೂ ಹಬ್ಬಿತು.

ಸುದ್ದಿ ತಿಳಿದು ಧಾವಿಸಿ ಬಂದ ಹದಿನೈದು ಅಗ್ನಿ ಶಾಮಕಗಳು ಮೂರು ತಾಸುಗಳ ಕಾರ್ಯಾಚರಣೆಯಲ್ಲಿ ಬೆಂಕಿ ನಂದಿಸಲು ಸಫ‌ಲವಾದವು.

Advertisement

Udayavani is now on Telegram. Click here to join our channel and stay updated with the latest news.

Next