Advertisement

ಚಾಮುಂಡಿಬೆಟ್ಟದ ತಪ್ಪಲಲ್ಲೂ ಬೆಂಕಿ

12:30 AM Feb 26, 2019 | Team Udayavani |

ಮೈಸೂರು: ಬಂಡೀಪುರ, ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಧಗಧಗಿಸುತ್ತಿರುವಾ
ಗಲೇ ಮೈಸೂರಿನ ಚಾಮುಂಡಿಬೆಟ್ಟದಲ್ಲೂ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದ ಬೆಂಕಿಯನ್ನು ನಂದಿಸುವಲ್ಲಿ ಅರಣ್ಯ ಮತ್ತು
ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

Advertisement

ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಮುಂಡಿಬೆಟ್ಟಕ್ಕೆ ಹೊಂದಿಕೊಂಡಂತಿರುವ ಬಿಜಿಎಸ್‌ ಸಂಸ್ಥೆಗೆ ಸೇರಿದ ಖಾಲಿ
ನಿವೇಶನದಲ್ಲಿ ಮಧ್ಯಾಹ್ನ 12.30ರ ಸುಮಾರಿನಲ್ಲಿ ಕಿಡಿಗೇಡಿಗಳು ಬೀಡಿ/ಸಿಗರೇಟ್‌ ಸೇದಿ ಎಸೆದಿದ್ದರಿಂದಾಗಿ ಬೆಂಕಿ ಕಿಡಿ
ಹೊತ್ತಿಕೊಂಡು ಐದಾರು ಎಕರೆ ಪ್ರದೇಶಕ್ಕೆ ಬೆಂಕಿ ಹತ್ತಿಕೊಂಡು ಉರಿಯಲಾರಂಭಿಸಿದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ
ಧಾವಿಸಿದ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾದರು.

Advertisement

Udayavani is now on Telegram. Click here to join our channel and stay updated with the latest news.

Next