Advertisement

ಕುಂಭಮೇಳ; ದಿಗಂಬರ ಅಖಾಡ ಟೆಂಟ್ ನಲ್ಲಿ ಸಿಲಿಂಡರ್ ಸ್ಫೋಟ, ಬೆಂಕಿ ಅವಘಡ!

08:23 AM Jan 14, 2019 | Sharanya Alva |

ಉತ್ತರಪ್ರದೇಶ: ವಿಶ್ವದ ಅತೀ ದೊಡ್ಡ ಧಾರ್ಮಿಕ ಸಮ್ಮೇಳನವಾದ ಪ್ರಯಾಗ್ ರಾಜ್ ನ ಕುಂಭಮೇಳದ ದಿಗಂಬರ ಅಖಾಡದಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ಸೋಮವಾರ ನಡೆದಿದೆ. ಆದರೆ ಘಟನೆಯಲ್ಲಿ ಯಾರೊಬ್ಬರಿಗೂ ಗಾಯವಾಗಿಲ್ಲ ಎಂದು ವರದಿ ತಿಳಿಸಿದೆ.

Advertisement

ಬೆಂಕಿ ಹೊತ್ತಿಕೊಂಡಿರುವ ಸುದ್ದಿ ಹರಡುತ್ತಿದ್ದಂತೆಯೇ ಜನರಲ್ಲಿ ಆತಂಕ ಮೂಡಿಸಿತ್ತು. ಯಾವುದೇ ಕಾಲ್ತುಳಿತವಾಗಲಿ, ಸಾವು, ನೋವು ಸಂಭವಿಸಿಲ್ಲ. ಸ್ಥಳಕ್ಕೆ ಭದ್ರತಾ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ಆರಿಸುವಲ್ಲಿ ಯಶಸ್ವಿಯಾಗಿದ್ದರು. ಸ್ಥಳೀಯ ವರದಿ ಪ್ರಕಾರ, ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿರುವುದಾಗಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next