Advertisement

ದೆಹಲಿಯಲ್ಲಿ ಮತ್ತೊಂದು ಅಗ್ನಿ ಅನಾಹುತ: ಮರದ ಕಾರ್ಖಾನೆಗೆ ಹಬ್ಬಿದ ಬೆಂಕಿಯ ಕೆನ್ನಾಲಿಗೆ

10:23 AM Dec 15, 2019 | Mithun PG |

ದೆಹಲಿ: ಪಶ್ಚಿಮ ದೆಹಲಿಯ ಮುಂಡ್ಕಾ ಪ್ರದೇಶದ ಮರದ ಕಾರ್ಖಾನೆಯೊಂದರಲ್ಲಿ ಇಂದು ಬೆಳಿಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡಿದ್ದು ಅದೃಷ್ಟವಶಾತ್ ಯಾವುದೇ ಸಾವುನೋವು ಸಂಭವಿಸಿಲ್ಲ.

Advertisement

ರಾಷ್ಟ್ರ ರಾಜಧಾನಿಯಲ್ಲಿನ ಝಾನ್ಸಿರಾಣಿ ರಸ್ತೆಯಲ್ಲಿರುವ ಕೃಷಿ ಮಾರುಕಟ್ಟೆ ಗೋದಾಮಿನ ಬಹುಮಹಡಿ ಕಟ್ಟಡದಲ್ಲಿ ವಾರದ ಹಿಂದೆ  ದಿಢೀರ್ ಅಗ್ನಿ ಅವಘಡ ಸಂಭವಿಸಿ, ಬೆಂಕಿಯ ಕೆನ್ನಾಲಗೆಗೆ ಸಿಲುಕಿ 43 ಜನ ಸಾವನ್ನಪ್ಪಿ, 21 ಜನ ಗಂಭೀರ ಗಾಯಗೊಂಡಿದ್ದರು. ಆ ಘಟನೆ ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ ನಡೆದಿದೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಮುಂಡ್ಕಾ ಮರದ ಕಾರ್ಖಾನೆಯಲ್ಲಿ ನಡೆದ ಅಗ್ನಿ ಅನಾಹುತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಪ್ರಾಥಮಿಕ ವರದಿ ತಿಳಿಸಿದೆ, ಸ್ಥಳಕ್ಕೆ 20 ಅಗ್ನಿಶಾಮಕ ವಾಹನ ಆಗಮಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

Advertisement

Udayavani is now on Telegram. Click here to join our channel and stay updated with the latest news.

Next