Advertisement

ಆಸ್ಪತ್ರೆಯಲ್ಲಿ ಅಗ್ನಿ ಅವಗಢ: ಐವರು ರೋಗಿಗಳು ಸಾವು

08:32 AM Apr 18, 2021 | Team Udayavani |

ರಾಯ್ ಪುರ: ಆಸ್ಪತ್ರೆಯಲ್ಲಿ ಅಗ್ನಿ ಅವಗಢ ಸಂಭವಿಸಿ ಕನಿಷ್ಠ ಐದು ಮಂದಿ ಸಾವನ್ನಪ್ಪಿದ ಘಟನೆ ಛತ್ತೀಸ್ ಗಢ್ ರಾಜ್ಯದ ರಾಯ್ ಪುರದಲ್ಲಿ ನಡೆದಿದೆ.

Advertisement

ರಾಯ್ ಪುರದ ರಾಜಧಾನಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಆಸ್ಪತ್ರೆಯಲ್ಲಿದ್ದ ಇತರ ರೋಗಿಗಳನ್ನು ಬೇರೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ. ಐವರು ಕೋವಿಡ್ -19 ಸೋಂಕಿತರು ಸಾವನ್ನಪ್ಪಿದ್ದಾರೆ. ರಮೇಶ್ ಸಾಹು ಸುಟ್ಟ ಗಾಯಗಳಿಂದ ಮೃತಪಟ್ಟಿದ್ದು, ಈಶ್ವರ್ ರಾವ್, ವಂದನಾ ಗಜ್ಮಾಲಾ, ಭಾಗ್ಯ ಶ್ರೀ ಮತ್ತು ದೇವಿಕಾ ಸೋಂಕರ್ ಎಂಬ ನಾಲ್ವರು ಹೊಗೆಯಲ್ಲಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next