Advertisement

ಗುಡಿಸಲಿಗೆ ಆಕಸ್ಮಿಕ ಬೆಂಕಿ: ವೃದ್ಧ ದಂಪತಿ ಸಜೀವ ದಹನ

10:47 AM Feb 26, 2023 | keerthan |

ವಿಜಯಪುರ: ಜಮೀನಿನಲ್ಲಿದ್ದ ಗುಡಿಸಲಿನಲ್ಲಿ ವಾಸವಿದ್ದ ವೃದ್ದ ದಂಪತಿ ಆಕಸ್ಮಿಕ ಅಗ್ನಿ ದುರಂತದಲ್ಲಿ ಸಜೀವ ದಹನವಾಗಿರುವ ದುರ್ಘಟನೆ ವಿಜಯಪುರ ಜಿಲ್ಲೆಯಲ್ಲಿ ಸಂಭವಿಸಿದೆ‌.

Advertisement

ಚಡಚಣ ಪಟ್ಟಣದ ಹೊರ ವಲಯದ ಜಮೀನಿನ ಗುಡಿಸಲಿನಲ್ಲಿ ವಾಸವಿದ್ದ 82 ವರ್ಷದ ಮಕರೀಂಸಾಬ್ ಟಪಾಲ ಹಾಗೂ 72 ವರ್ಷದ ಸಾಜನಬೀ ಟಪಾಲ್ ಅಗ್ನಿ ದುರಂತದಲ್ಲಿ ಸಜೀವ ದಹನವಾದ ದುರ್ದೈವಿಗಳು.

ನೀವರಗಿ ರಸ್ತೆಯಲ್ಲಿನ ತಮ್ಮ ಜಮೀನಿನಲ್ಲಿ ಈ ವೃದ್ಧ ದಂಪತಿ ಗುಡಿಸಲು ಹಾಕಿಕೊಂಡು ವಾವಿದ್ದರು. ಶನಿವಾರ ವೃದ್ದ ದಂಪತಿ ಮಲಗಿದ್ದಾಗ ತಡರಾತ್ರಿ ಆಕಸ್ಮಿಕವಾಗಿ ಗುಡಿಸಲಿಗೆ ಬೆಂಕಿ ಹೊತ್ತಿಕೊಂಡಿದ್ದು, ಬೇಸಿಗೆಯ ಬಿಸಿಲ ಧಗೆ ಹೆಚ್ಚಿರುವ ಕಾರಣ ಗುಡಿಸಲಿಗೆ ಹೊತ್ತಿದ ಬೆಂಕಿ ಬೇಗನೇ ಇಡೀ ಗುಡಿಸಲು ಆವರಿಸಿದೆ ಎನ್ನಲಾಗಿದೆ. ಪರಿಣಾಮ ವೃದ್ಧ ದಂಪತಿ ಸಜೀವ ದಹನವಾಗಿದ್ದಾರೆ.

ಇದನ್ನೂ ಓದಿ:ಗೆಳತಿಗೆ ಮೆಸೇಜ್‌ ಮಾಡಿದಕ್ಕೆ ಸ್ನೇಹಿತನ ಶಿರಚ್ಛೇದ ಮಾಡಿ, ಹೃದಯವನ್ನು ಹೊರ ತೆಗೆದ ವ್ಯಕ್ತಿ

ಭಾನುವಾರ ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದ್ದು, ಸ್ಥಳಕ್ಕೆ ಧಾವಿಸಿರುವ ಚಡಚಣ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next