Advertisement

ಚೆನ್ನೈ; ಪಟಾಕಿ ಕಾರ್ಖಾನೆಯಲ್ಲಿ ಭಾರಿ ಅಗ್ನಿ ದುರಂತ…11 ಜನ ಸಾವು

06:23 PM Feb 12, 2021 | Team Udayavani |

ಚೆನ್ನೈ: ಪಟಾಕಿ ಕಾರ್ಖಾನೆಯಲ್ಲಿ ನಡೆದ ಅಗ್ನಿ ಅವಘಡದಲ್ಲಿ 11 ಜನ ಸಾವನ್ನಪ್ಪಿ, 36 ಜನ ಗಾಯಗೊಂಡಿರುವ ಘಟನೆ ತಮಿಳುನಾಡಿನ ವಿರುಧನಗರದಲ್ಲಿ ನಡೆದಿದೆ.ಚೆನ್ನೈನಿಂದ 500 ಕಿ.ಮೀ ದೂರದಲ್ಲಿರುವ ವಿರುಧನಗರದ ಪಟಾಕಿ ಕಾರ್ಖಾನೆಯಲ್ಲಿ ಇಂದು (ಫೆ.12) ಮಧ್ಯಾಹ್ನ 1.30 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ ಎಂದು ವರದಿ ಹೇಳಿದೆ.

Advertisement

ಪಟಾಕಿಗಳಿಗೆ ಕೆಲವೊಂದು ರಾಸಾಯನಿಕ ಮಿಶ್ರಣ ಮಾಡುವ ವೇಳೆ ಅಗ್ನಿ ಹೊತ್ತಿಕೊಂಡಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಸ್ಥಳಕ್ಕೆ ಧಾವಿಸಿರುವ ಅಗ್ನಿ ಶ್ಯಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.

ಇನ್ನು ಘಟನೆ ಕುರಿತು ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ಮೃತ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರ ಧನ ಘೋಷಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ  ಪಳನಿಸ್ವಾಮಿ ಮೃತರ ಕುಟುಂಬಕ್ಕೆ ತಲಾ 3 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next