Advertisement

ಪ.ಬಂಗಾಳ, ದೆಹಲಿ, ಮಹಾರಾಷ್ಟ್ರದಲ್ಲಿ ಪಟಾಕಿ ನಿಷೇಧ! ದೀಪ ಬೆಳಗಿಸಿ ದೀಪಾವಳಿ ಆಚರಣೆಗೆ ಸೂಚನೆ

01:32 PM Nov 06, 2020 | sudhir |

ಕೋಲ್ಕತ್ತಾ/ನವದೆಹಲಿ/ಮುಂಬಯಿ:ಕೋವಿಡ್ ಪ್ರಕರಣದ ಹಿನ್ನೆಲೆ ಹಾಗೂ ಪಟಾಕಿ ಬಳಕೆಯಿಂದ ವಾತಾವರಣದ ಮೇಲಾಗುವ ಪರಿಣಾಮಗಳನ್ನು ಅವಲೋಕಿಸಿ ಈ ಬಾರಿ ದೀಪಾವಳಿಗೆ ಪಟಾಕಿಯನ್ನು ನಿಷೇಧಿಸಿ ಸರಳವಾಗಿ ಹಾಗೂ ಕೋವಿಡ್ ಮಾರ್ಗ ಸೂಚಿಗಳ ಅನ್ವಯ ಆಚರಣೆ ಮಾಡಲು ಸೂಚಿಸಲಾಗಿದೆ.

Advertisement

ಕೋವಿಡ್ ಹಿನ್ನೆಲೆಯಲ್ಲಿ ಕಾಳಿಪೂಜೆಯ ವೇಳೆ ಪಟಾಕಿಗಳ ಬಳಕೆ ಹಾಗೂ ಮಾರಾಟವನ್ನು ನಿಷೇಧಿಸಿ ಗುರುವಾರ ಕಲ್ಕತ್ತಾ ಹೈಕೋರ್ಟ್‌ ಆದೇಶ ನೀಡಿದೆ. ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿ ನ್ಯಾಯಪೀಠ ಈ ಸೂಚನೆ ನೀಡಿದೆ. ನ.15ರಂದು ಕಾಳಿ ಪೂಜೆ ನಡೆಯಲಿದೆ. ಜಗದ್ಧಾತ್ರಿ ಪೂಜೆ, ಛತ್‌ ಹಾಗೂ ಕಾರ್ತಿಕ ಪೂಜೆಗೂ ಇದು ಅನ್ವಯವಾಗಲಿದೆ. ಜತೆಗೆ ದೇವರ ಮೂರ್ತಿ ವಿಸರ್ಜನೆ ವೇಳೆ ಮೆರವಣಿಗೆಗೂ ನಿರ್ಬಂಧ ಹೇರಲಾಗಿದೆ.

ದೆಹಲಿಯಲ್ಲೂ ಬ್ಯಾನ್‌:
ಇದೇ ವೇಳೆ, ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿರುವುದರಿಂದ ಕೊರೊನಾ ಸೋಂಕಿನ ವ್ಯಾಪಿಸುವಿಕೆಯೂ ಹೆಚ್ಚಳವಾಗುವ ಸಾಧ್ಯತೆ ಇರುವುದಾಗಿ ತಜ್ಞರು ಎಚ್ಚರಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಪಟಾಕಿ ಬಳಕೆಗೆ ನಿಷೇಧ ಹೇರಲಾಗಿದೆ. ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರೇ ಈ ಕುರಿತು ಟ್ವಿಟರ್‌ನಲ್ಲಿ ಘೋಷಿಸಿದ್ದಾರೆ.

ಮಹಾರಾಷ್ಟ್ರದಲ್ಲೂ ಕೋವಿಡ್ ಪ್ರಕರಣಗಳು ಇರುವ ಕಾರಣ ಪಟಾಕಿ ಬದಲು ದೀಪ ಬೆಳಗಿಸಿ ದೀಪಾವಳಿ ಆಚರಿಸಲು ಸೂಚನೆ ನೀಡಲಾಗಿದೆ, ಅಲ್ಲದೆ ಆರೋಗ್ಯದ ಹಿತ ದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಮಾಡಬೇಕೆಂದು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಹೇಳಿದೆ.

ಪ್ರಸ್ತುತ, ಪುಣೆ, ಥಾಣೆ, ಮುಂಬೈ, ನಾಸಿಕ್, ನಾಗ್ಪುರ, ಚಂದ್ರಪುರ, ರಾಯಗಡ್ ಮತ್ತು ಸತಾರಾದಲ್ಲಿ ಗರಿಷ್ಠ ಸಂಖ್ಯೆಯ ಸಕ್ರಿಯ ರೋಗಿಗಳಿದ್ದು ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಪಟಾಕಿ ನಿಷೇಧಿಸಲು ಹೇಳಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next