Advertisement

ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

06:40 AM May 09, 2019 | Team Udayavani |

ಕನಕಪುರ: ತಾಲೂಕಿನ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕದ ಮೇಲೆ ನೀರು ಸೋರಿ ಅಗ್ನಿ ಅವಘಡ ಸಂಭವಿಸಿದ್ದು, ಮೂವರು ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ.

Advertisement

ಮಂಡ್ಯ ಜಿಲ್ಲೆಯ ಕೊಪ್ಪ ಗ್ರಾಮದ ಮಾಸ್ತೀಗೌಡ ಎಂಬುವರಿಗೆ ಸೇರಿದ ಕಾರ್ಖಾನೆಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ರಾಜೇಶ್‌, ಶಿಲ್ಪ ಮತ್ತು ಕುಮಾರ್‌ ಎಂಬುವರೇ ಅಗ್ನಿ ಅವಘಡದಲ್ಲಿ ಸಿಲುಕಿದ ದುರ್ದೈವಿಗಳು. ಈ ಮೂವರು ಬುಧವಾರ ಕೆಲಸ ಆರಂಭಿಸುತ್ತಿದ್ದಂತೆ ಈ ಅವಘಡ ನಡೆದಿದೆ ಎನ್ನಲಾಗಿದೆ.

ಸುದ್ದಿ ತಿಳಿದ ತಕ್ಷಣ ಕಾರ್ಖಾನೆ ಮಾಲಿಕರೇ ಮೂವರನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸುತ್ತಿದ್ದಾರೆ. ಕೈಗಾರಿಕಾ ಪ್ರದೇಶದಲ್ಲಿ ಚಿಕ್ಕದಾಗಿ ನಿರ್ಮಿಸಿರುವ ಕೊಠಡಿಯಲ್ಲಿ ಸೋಡಿಯಂ ಮೆಟಲ್‌ಗ‌ಳನ್ನು ಕಟ್‌ ಮಾಡುವ ವೇಳೆ, ಸೋಡಿಯಂ ಮೇಲೆ ನೀರು ಬಿದ್ದು, ಬೆಂಕಿ ಹೊತ್ತಿಕೊಂಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next