Advertisement
ಲಿಂಗಾಯಿತ ಸ್ವತಂತ್ರ ಧರ್ಮ ವಿಚಾರವಾಗಿ ಮೊದಲು ಬೆಂಕಿ ಹಚ್ಚಿದ್ದು ರಾಜ್ಯ ಸರ್ಕಾರ. ಮಗುವನ್ನು ಚಿವುಟುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ. ಮುಂದೆ ಎಲ್ಲಾ ಜಾತಿಯವರು ಪ್ರತ್ಯೇಕ ಧರ್ಮ ಮಾಡುವಂತೆ ಬೇಡಿಕೆ ಇಡುತ್ತಾರೆ. ಇದು ಕಾಂಗ್ರೆಸ್ಗೆ ತಿರುಗು ಬಾಣವಾಗಲಿದೆ ಎಂದು ಹೇಳಿದರು.
ಸ್ವತಃ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಸೇರಿದಂತೆ ಸರ್ಕಾರದಲ್ಲಿರುವ ಬಹುತೇಕರು “ಲ್ಯಾಂಡ್ ಮಾಫಿಯಾದ ಗುಲಾಮ’ರಾಗಿದ್ದಾರೆ ಎಂದು ಲೇವಡಿ ಮಾಡಿದರು. ಕೆರೆಗಳನ್ನು ಡಿ ನೋಟಿಫೈ ಮಾಡುವ ಸಂಪುಟದ ನಿರ್ಧಾರವನ್ನು ಕೂಡಲೇ ವಾಪಾಸು
ಪಡೆಯಬೇಕು. ಇಲ್ಲವಾದಲ್ಲಿ ರಾಜ್ಯ ಸರ್ಕಾರದ ಕುತಂತ್ರ ರಾಜಕಾರಣಕ್ಕೆ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ. ಈ ಕುರಿತು ರಾಜ್ಯಪಾಲರಿಗೆ ತಾವು ಪತ್ರ ಬರೆದಿರುವುದಾಗಿ ತಿಳಿಸಿದರು. ರಾಜ್ಯದಲ್ಲಿ ಭೀಕರ ಬರ ಎದುರಾಗಿದೆ. ಕೆರೆ, ಕಟ್ಟೆಗಳಲ್ಲಿ ನೀರಿಲ್ಲ. ಇಂತಹ ಸಂದರ್ಭದಲ್ಲಿ ಸರ್ಕಾರ ಕೆರೆಗಳನ್ನು ಉಳಿಸಲು ಮುಂದಾಗಬೇಕು. ಇದು ಜೀವಂತ ಸರ್ಕಾರದ ಲಕ್ಷಣ. ಆದರೆ ರಾಜ್ಯದಲ್ಲಿ ಇದಕ್ಕೆ ತದ್ವಿರುದ್ಧವಾದ ಸರ್ಕಾರವಿದೆ. ದೇಶದ ಇತಿಹಾಸದಲ್ಲಿ ಇಂತಹ ಕುತಂತ್ರ ಸರ್ಕಾರವನ್ನು ಹಿಂದೆಂದೂ ಕಂಡಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
Related Articles
Advertisement
ಗುಜರಾತಿನ ಕಾಂಗ್ರೆಸ್ ಶಾಸಕರ ರೇಸಾರ್ಟ್ ರಾಜಕೀಯಕ್ಕೂ, ಐಟಿ ದಾಳಿಗೂ ಒಂದಕ್ಕೊಂದು ಸಂಬಂಧವೇ ಇಲ್ಲ. ಕಾಂಗ್ರೆಸ್ ಮುಖಂಡರು ಇದಕ್ಕೆ ತಾಳೆ ಹಾಕಿದರೆ ಗುಜರಾತ್ನಿಂದ ಬಂದಿರುವ ಶಾಸಕರಲ್ಲಿ ಪಕ್ಷ ನಿಷ್ಠೆ ಇಲ್ಲ. ಅವರು ಖರೀದಿ ವಸ್ತು ಎಂಬುದನ್ನು ಸ್ವತಃ ಒಪ್ಪಿಕೊಂಡಂತಾಗುತ್ತದೆ. ಕಾಂಗ್ರೆಸ್ನ ದೌರ್ಬಲ್ಯ ತೋರಿಸಿದಂತಾಗುತ್ತದೆ. ಬೇಕಾದರೆ ಕರೆ ತಂದಿರುವ ಶಾಸಕರನ್ನು ಗಟ್ಟಿಯಾಗಿ ಹಿಡಿದಿಟ್ಟುಕೊಳ್ಳಲಿ. ಅದಕ್ಕೆ ನಮ್ಮದೇನು ಅಭ್ಯಂತರವಿಲ್ಲ ಎಂದು ತಿರುಗೇಟು ನೀಡಿದರು. ಗುಜರಾತ್ನಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಜನ ತೊಂದರೆಗೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಶಾಸಕರಾಗಿ ಅಲ್ಲಿನ ಜನರ ಕಷ್ಟ ಆಲಿಸುವುದರ ಬದಲು ಮೋಜು-ಮಸ್ತಿ ಮಾಡುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.