Advertisement

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ಚಾಲಕ ಪವಾಡ ಸದೃಶ ಪಾರು

08:28 AM Jul 19, 2017 | Team Udayavani |

ಬೆಳಗಾವಿ: ಚಲಿಸುತ್ತಿದ್ದ ಇಂಡಿಕಾ ಕಾರಿನಲ್ಲಿ ಅಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅದೃಷ್ಟವಶಾತ್‌ ಚಾಲಕ ಪಾರಾದ ಘಟನೆ ನಗರದ ಕೋಟೆಕೆರೆ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.

Advertisement

ಘಟನೆಯಲ್ಲಿ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕಾರು ಮಾರಿಹಾಳ ಪೊಲೀಸ್‌ ಠಾಣೆಯ ಮುಖ್ಯ ಪೇದೆ ದಿವಟೆ ಎಂಬುವವರಿಗೆ ಸೇರಿದ್ದಾಗಿದೆ. ಕರ್ತವ್ಯ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ತಕ್ಷಣ ಎಚ್ಚೆತ್ತುಕೊಂಡ ದಿವಟೆಗೆ ಕಾರನ್ನು ಅಲ್ಲೇ ನಿಲ್ಲಿಸಿ ಕಾರಿನಿಂದ ಕೆಳಗಿಳಿದು ಬಚಾವಾಗಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದರು. ನಗರದ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next