Advertisement

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

12:57 PM May 19, 2024 | Team Udayavani |

ಬೆಂಗಳೂರು: ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ. ವಿಮಾನದ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದೇ ಇದಕ್ಕೆ ಕಾರಣ.

Advertisement

ಬೆಂಗಳೂರು ವಿಮಾನ ನಿಲ್ದಾಣದ ವಕ್ತಾರರ ಹೇಳಿಕೆಯ ಪ್ರಕಾರ, ಲ್ಯಾಂಡಿಂಗ್ ನಂತರ ಎಲ್ಲಾ 179 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ವಿಮಾನದಿಂದ ಯಶಸ್ವಿಯಾಗಿ ಸ್ಥಳಾಂತರಿಸಲಾಯಿತು.

ಐಎಕ್ಸ್ 1132 ವಿಮಾನವು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾತ್ರಿ 11.12 ಕ್ಕೆ ಇಳಿಯಿತು, ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಒಳಗಿನ ಸಿಬ್ಬಂದಿ ಬಲ ಇಂಜಿನ್‌ ನಲ್ಲಿ ಬೆಂಕಿಯನ್ನು ಗಮನಿಸಿ ಏರ್ ಟ್ರಾಫಿಕ್ ಕಂಟ್ರೋಲರ್ (ಎಟಿಸಿ) ಗೆ ವರದಿ ಮಾಡಿದರು ಎಂದು ಪ್ರಕಟಣೆ ತಿಳಿಸಿದೆ.

ಪೂರ್ಣ-ಪ್ರಮಾಣದ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು; ಇಳಿದ ತಕ್ಷಣ ಬೆಂಕಿಯನ್ನು ನಂದಿಸಲಾಯಿತು ಎಂದು ಅದು ಹೇಳಿದೆ.

“ಟೇಕ್ ಆಫ್ ಆದ ನಂತರ ಬಲ ಇಂಜಿನ್‌ ನಿಂದ ಬೆಂಕಿ ಕಾಣಿಸಿಕೊಂಡಿದ್ದರಿಂದ, ಬೆಂಗಳೂರು-ಕೊಚ್ಚಿ ವಿಮಾನವು ಹಿಂತಿರುಗಿತು. ಬೆಂಗಳೂರಿನಲ್ಲಿ ಮುನ್ನೆಚ್ಚರಿಕೆಗಾಗಿ ಲ್ಯಾಂಡಿಂಗ್ ಮಾಡಿತು. ನಮ್ಮ ಅತಿಥಿಗಳು ತಮ್ಮ ಗಮ್ಯಸ್ಥಾನವನ್ನು ಸಾಧ್ಯವಾದಷ್ಟು ಬೇಗ ತಲುಪಲು ಪರ್ಯಾಯ ವ್ಯವಸ್ಥೆಗಳನ್ನು ಒದಗಿಸಲು ಕೆಲಸ ಮಾಡುತ್ತಿದ್ದೇವೆ” ಎಂದು ಏರ್‌ಲೈನ್ಸ್ ಹೇಳಿಕೆಯಲ್ಲಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next