Advertisement

ಬಂಡೀಪುರ ಅರಣ್ಯಕ್ಕೆ ಬೆಂಕಿ: ಆರೋಪಿ ಬಂಧನ

12:30 AM Mar 01, 2019 | Team Udayavani |

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಬೆಂಕಿ ಇಟ್ಟ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ತಾಲೂಕಿನ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿರುವ ಕಳ್ಳಿàಪುರ ಗ್ರಾಮದ ಅರುಣಕುಮಾರ (30) ಬಂಧಿತ.

Advertisement

ಈತ ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಾಹಿತಿ ಮೇರೆಗೆ ಗುರುವಾರ ಸಂಜೆ ವಶಕ್ಕೆ ಪಡೆದುಕೊಂಡಿದ್ದಾರೆ. ಯಾವ ಕಾರಣಕ್ಕಾಗಿ ಕಾಡಿಗೆ ಬೆಂಕಿ ಇಟ್ಟ ಎಂಬ ಬಗ್ಗೆ ವಿಚಾರಣೆ ನಡೆಸುತ್ತಿರುವ ಅಧಿಕಾರಿಗಳು ಗುರುವಾರ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ. ಈ ಬಗ್ಗೆ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಾರ್ಯಾಚರಣೆಯಲ್ಲಿ ಜಿ.ಎಸ್‌.ಬೆಟ್ಟದ ಆರ್‌.ಎಫ್.ಒ. ಪುಟ್ಟಸ್ವಾಮಿ ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next