Advertisement

ಚಲಿಸುತ್ತಿರುವಾಗಲೆ ಹೊತ್ತಿ ಉರಿದ KSRTC ಬಸ್‌ ;ಪ್ರಯಾಣಿಕರು ಪಾರು 

03:17 PM Apr 01, 2017 | Team Udayavani |

ಸಕಲೇಶಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 75 ರ ಮಾರನ ಹಳ್ಳಿ ಎಂಬಲ್ಲಿ ಶನಿವಾರ ಮಧ್ಯಾಹ್ನ  ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ  ಕೆಎಸ್‌ಆರ್‌ಟಿಸಿ ಬಸ್ಸೊಂದು ಇದ್ದಕ್ಕಿದ್ದಂತೆ ಹೊತ್ತಿ ಉರಿದ ಘಟನೆ ನಡೆದಿದ್ದು, ಚಾಲಕನ ಸಮಯ ಪ್ರಜ್ಞೆಯಿಂದಾಗಿ ಪ್ರಯಾಣಿಕರೆಲ್ಲರೂ ಯಾವುದೇ ಹಾನಿಯಿಲ್ಲದೆ ಪಾರಾಗಿದ್ದಾರೆ.

Advertisement

ಚಲಿಸುತ್ತಿರುವಾಗಲೇ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ  ಇಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದ್ದು ಕೂಡಲೇ ಚಾಲಕ ಬಸ್‌ ಬದಿಗೆ ನಿಲ್ಲಿಸಿ ಪ್ರಯಾಣಿಕರು ಲಗೇಜ್‌ ಸಮೇತ ಕೆಳಗಿಳಿಯುವಂತೆ ಸೂಚಿನೆ ನೀಡಿದ್ದಾರೆ. 

ಸ್ಥಳದಲ್ಲಿ ರುವವರು ಬಾಟಲಿಗಳಲ್ಲಿದ್ದ ನೀರನ್ನು ಹಾಕಿ ಬೆಂಕಿ ನಂದಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ, ಅಗ್ನಿ ಶಾಮಕ ದಳದ ಸಿಬಂದಿಗಳು ಸ್ಥಳಕ್ಕಾಗಮಿಸುವಷ್ಟರಲ್ಲಿ ಬಸ್‌ ಸಂಪೂರ್ಣ ಭಸ್ಮವಾಗಿತ್ತು.

ಕೆಲ ಕಾಲ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸ್ಥಳಕ್ಕಾಗಮಿಸಿದ ಸಕಲೇಶಪುರ ಗ್ರಾಮೀಣ ಠಾಣಾ ಪೊಲೀಸರು ಸಂಚಾರ ಸುಗಮಗೊಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next