Advertisement

ಚಲಿಸುತ್ತಿರುವಾಗಲೇ ಹೊತ್ತಿ ಉರಿದ ದ್ವಿಚಕ್ರ ವಾಹನ: ಇಬ್ಬರಿಗೆ ಗಂಭೀರ ಗಾಯ

07:58 PM Jun 24, 2022 | Team Udayavani |

ಮಂಡ್ಯ: ಚಲಿಸುತ್ತಿರುವಾಗಲೇ ದ್ವಿಚಕ್ರ ವಾಹನವೊಂದರ ಪೆಟ್ರೋಲ್ ಚೆಲ್ಲಿ ಬೆಂಕಿ ಹೊತ್ತಿಕೊಂಡು ಉರಿದ ಪರಿಣಾಮ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಭಯಾನಕ ಘಟನೆ ಶ್ರೀರಂಗಪಟ್ಟಣ ಸಮೀಪದ ದರಸಗುಪ್ಪೆ ಗ್ರಾಮದ ಪಾಂಡವಪುರ-ಶ್ರೀರಂಗಪಟ್ಟಣ ರಸ್ತೆಯಲ್ಲಿ ನಡೆದಿದೆ.

Advertisement

ಮೈಸೂರು ಮೂಲಕ ಶಿವರಾಮು(73) ಹಾಗೂ ಅನಂತಯ್ಯ ಎಂಬುವರು ಮೈಸೂರಿನಿಂದ ಪಾಂಡವಪುರ ತಾಲೂಕಿನ ಕೆ.ಬೆಟ್ಟಹಳ್ಳಿ ಗ್ರಾಮದ ಸಂಬಂಧಿಕರ ಗೃಹ ಪ್ರವೇಶಕ್ಕೆ ತೆರಳುತ್ತಿದ್ದಾಗ ದರಸಗುಪ್ಪೆ ಗ್ರಾಮದ ಬಳಿ ಬರುತ್ತಿದ್ದಂತೆ ತಾವು ತಂದಿದ್ದ ಜುಪಿಟರ್ ಬೈಕ್‌ನ ಪೆಟ್ರೋಲ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ನಿಲ್ಲಿಸುವಷ್ಟರಲ್ಲೇ ನಡುರಸ್ತೆಯಲ್ಲಿ ಬೈಕ್‌ಗೆ ಬೆಂಕಿ ಅವರಿಸಿಕೊಂಡಿದೆ. ಶಿವರಾಮು  ಬೆಂಕಿ ಕೆನ್ನಾಲಿಗೆ ಸಿಲುಕಿದ್ದಾರೆ. ಇದರಿಂದ ಹೊರ ಬರಲಾರದೆ ನರಳಾಡುತ್ತಿದ್ದಾಗ ಅಲ್ಲಿದ್ದ ಸಾರ್ವಜನಿಕರು ಅವರನ್ನು ರಕ್ಷಿಸಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next