Advertisement

ಸಿಎಂ ಸಲಹೆಗಾರರ ಕೊಠಡಿಯಲ್ಲಿ ಬೆಂಕಿ

12:32 AM Dec 11, 2019 | Lakshmi GovindaRaj |

ಬೆಂಗಳೂರು: ಬಹುಮಹಡಿ ಕಟ್ಟಡದಲ್ಲಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಇ-ಆಡಳಿತ ವಿಭಾಗದ ಸಲಹೆಗಾರರಾದ ಬೇಳೂರು ಸುದರ್ಶನ ಅವರ ಕೊಠಡಿಯಲ್ಲಿ ಶಾರ್ಟ್‌ ಸರ್ಕ್ನೂಟ್‌ನಿಂದ ಸಣ್ಣ ಪ್ರಮಾಣದ ಬೆಂಕಿ ಕಾಣಿಸಿಕೊಂಡ ಘಟನೆ ಮಂಗಳವಾರ ನಡೆದಿದೆ.

Advertisement

ಬಹುಮಹಡಿ ಕಟ್ಟಡದ ಎರಡನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 232ರಲ್ಲಿ ಬೆಳಗ್ಗೆ 9.50ರ ಸುಮಾರಿಗೆ ಕಚೇರಿ ಕರ್ತವ್ಯಕ್ಕೆ ಹಾಜರಾದ ಮಹಿಳಾ ಸಿಬ್ಬಂದಿಯೊಬ್ಬರು, ಕೊಠಡಿಯ ಬಾಗಿಲು ತೆರೆದು ವಿದ್ಯುತ್‌ ಸ್ವಿಚ್‌ ಒತ್ತಿದ್ದಾರೆ. ಆಗ ಇದ್ಕಕಿದ್ದಂತೆ ಟ್ಯೂಬ್‌ಲೈಟ್‌ಗಳನ್ನು ಅಳವಡಿಸಿದ್ದ ಜಾಗದಲ್ಲಿ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡು ದಟ್ಟವಾದ ಹೊಗೆ ಆವರಿಸಿದೆ.

ಗಾಬರಿಗೊಂಡ ಅವರು ಕೊಠಡಿಯಿಂದ ಹೊರಬಂದು ಅವಘಡದ ಬಗ್ಗೆ ಇತರೆ ಸಿಬ್ಬಂದಿಗೆ ತಿಳಿಸಿ, ಅಗ್ನಿಶಾಮಕ ದಳಕ್ಕೆ ದೂರು ನೀಡಿದ್ದಾರೆ. ಕೂಡಲೇ ವಾಹನದೊಂದಿಗೆ ಸ್ಥಳಕ್ಕೆ ದೌಡಾಯಿಸಿದ ಸಿಬ್ಬಂದಿ ಬೆಂಕಿ ನಂದಿಸಿದ್ದು, ಅದೃಷ್ಟವಶಾತ್‌ ಯಾವುದೇ ಅನಾಹುತ ಸಂಭವಿಸಿಲ್ಲ. ಕಡತಗಳಿಗೂ ಹಾನಿಯಾಗಿಲ್ಲ. ಶಾರ್ಟ್‌ ಸರ್ಕ್ನೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರುವುದು ಗೊತ್ತಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next