Advertisement

ಪ್ಯಾಸೆಂಜರ್ ರೈಲು ಎಂಜಿನ್ ನಲ್ಲಿ ಬೆಂಕಿ; ತಪ್ಪಿದ ಭಾರಿ ಅವಘಡ

10:01 AM Sep 13, 2019 | keerthan |

ವಿಜಯಪುರ: ಚಲಿಸುವ ರೈಲಿನ ಎಂಜಿನ್ ಬೆಂಕಿ ಕಾಣಿಸಿಕೊಂಡು ಪರಿಣಾಮ ಕೆಲ ಕಾಲ ಭಯದ ವಾತಾವರಣ ನಿರ್ಮಾಣವಾದ ಘಟನೆ ವಿಜಯಪುರ ಜಿಲ್ಲೆಯಲ್ಲಿ ಜರುಗಿದೆ.

Advertisement

ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ-ಪಡನೂರ ಮಧ್ಯೆ ಸೋಲಾಪುರ ಕಡೆಗೆ ಹೊರಟಿದ್ದ ಪ್ಯಾಸೆಂಜರ್ ರೈಲಿನಲ್ಲಿ  ಬೆಂಕಿ ಕಾಣಿಸಿಕೊಂಡ ಪರಿಣಾಮ ಕೂಡಲೇ ಚಾಲಕ ರೈಲು ಸಂಚಾರ ಸ್ಥಗಿತಗೊಳಿಸಿದ್ದಾನೆ. ವಿಜಯಪುರ ನಗರಿಂದ ಮಹಾರಾಷ್ಟ್ರದ ಸೋಲಾಪುರ ಕಡೆಗೆ ಹೊರಟಿದ್ದ ರೈಲಿನಲ್ಲಿದ್ದ ಪ್ರಯಾಣಿಕರು ಸುರಕ್ಷಿತ ವಾಗಿದ್ದು, ಯಾವುದೇ ರೀತಿಯಲ್ಲಿ ಅಪಾಯ ಸಂಭವಿಸಿಲ್ಲ.

ಬೆಂಕಿಯ ಪ್ರಮಾಣ ಸಣ್ಣ ಪ್ರಮಾಣದಲ್ಲಿದ್ದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ. ಬೆಂಕಿಯ ಕಾರಣ ಸುಮಾರು ಎರಡು ಗಂಟೆಗಳ ಕಾಲ ರೈಲು ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ಬೇರೆ ಎಂಜಿನ್ ತಂದು ರೈಲು ಸಂಚಾರ ಆರಂಭಗೊಂಡು, ಬೆಂಕಿ‌ ಕಾಣಿಸಿಕೊಂಡು ಆತಂಕ ‌ಮೂಡಿಸಿದ್ದ ರೈಲು ಮಹಾರಾಷ್ಟ್ರದ ಸೋಲಾಪುರ ಕಡೆಗೆ ಪ್ರಯಾಣ ಬೆಳೆಸಿದೆ.

Advertisement

Udayavani is now on Telegram. Click here to join our channel and stay updated with the latest news.

Next