Advertisement

ಮೂಡಿಗೆರೆ: ಬೆಂಕಿ ಅವಗಢಕ್ಕೆ ಸುಟ್ಟು ಕರಕಲಾಯಿತು ನಾಲ್ಕು ಅಂಗಡಿಗಳು

12:02 PM Jun 10, 2021 | Team Udayavani |

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಅಂಗಡಿಗಳಿಗೆ ಆಕಸ್ಮಿಕ ಬೆಂಕಿ ತಗುಲಿ, ನಾಲ್ಕು ಅಂಗಡಿ ಸಂಪೂರ್ಣ ಭಸ್ಮವಾಗಿವೆ.

Advertisement

ಪರಿಣಾಮ ಬೇಕರಿ, ಚಪ್ಪಲಿ ಅಂಗಡಿ, ಮೊಬೈಲ್ ಅಂಗಡಿ, ಕಟ್ಟಿಂಗ್ ಶಾಪ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿವೆ.

ಇದನ್ನೂ ಓದಿ:ಶಿರಾಡಿ: ಚಾಲಕನ ನಿಯಂತ್ರಣ ತಪ್ಪಿ ಅಡ್ಡಲಾಗಿ ಬಿದ್ದ ಅಡುಗೆ ಅನಿಲ ತುಂಬಿದ್ದ ಟ್ಯಾಂಕರ್

ಬಣಕಲ್ ಮಹೇಶಗೌಡ ಎಂಬವರಿಗೆ ಸೇರಿದ ಕಾಂಪ್ಲೆಕ್ಸ್ ಇದಾಗಿದ್ದು, ಬೆಂಕಿ ಆರಿಸಲು ಸ್ಥಳಕ್ಕೆ ಮೂಡಿಗೆರೆ, ಚಿಕ್ಕಮಗಳೂರು ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದರು.

Advertisement

ಬೆಂಕಿ ಆರಿಸಲು ಸಬ್ ಇನ್ಸ್ಪೆಕ್ಟರ್ ಶ್ರೀನಾಥ್ ರೆಡ್ಡಿ ಮತ್ತು ಪೊಲೀಸರು ಮೊಕ್ಕಾಂ ಹೂಡಿದರು.

Advertisement

Udayavani is now on Telegram. Click here to join our channel and stay updated with the latest news.

Next