Advertisement

ಸಂಕೇಶ್ವರ : 2 ಕ್ಯಾಂಟರ್ ಲಾರಿಗಳಿಗೆ ಆಕಸ್ಮಿಕ ಬೆಂಕಿ; ಲಕ್ಷಾಂತರ ರೂ. ನಷ್ಟ

11:42 AM May 12, 2023 | Team Udayavani |

ಸಂಕೇಶ್ವರ : ಧಾಬಾ ಒಂದರ ಮುಂದೆ ಕಾರುಗಳನ್ನು ಹೊತ್ತು ನಿಂತಿದ್ದ ಎರಡು ಕ್ಯಾಂಟರ್ ಲಾರಿಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ನಷ್ಟವಾದ ಘಟನೆ ಹುಕ್ಕೇರಿ ತಾಲೂಕಿನ ಹಿಟ್ನಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೇ. 12 ರ ಶುಕ್ರವಾರ ಬೆಳಿಗ್ಗೆ ನಡೆದಿದೆ.

Advertisement

ಶುಕ್ರವಾರ ಬೆಳಿಗ್ಗೆ ಹುಕ್ಕೇರಿ ತಾಲೂಕಿನ ಹಿಟ್ನಿ ಕ್ರಾಸ್ ಬಳಿ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿಯ ಧಾಬಾ ಒಂದರ ಮುಂದೆ ನಿಂತಿದ್ದ ಕ್ಯಾಂಟರ್ ಲಾರಿಗಳಿಗೆ ಬೆಂಕಿ ಬಿದ್ದು ಈ ಅವಘಡ ಸಂಭವಿಸಿದೆ.

ಆದರೆ ಈ ಬೆಂಕಿ ಅವಘಡ ನಡೆದ ಸ್ಥಳದಿಂದ ಸ್ವಲ್ಪ ಅಂತರದಲ್ಲಿಯೇ ಪೆಟ್ರೋಲ್ ಬಂಕ್ ಒಂದು ಇದ್ದು, ಇದಕ್ಕೂ ಅಪಾಯವಾಗುವ ಪರಿಸ್ಥಿತಿ ಇದೆ ಎನ್ನಲಾಗಿದೆ. ಅಲ್ಲದೆ ಈ ಕ್ಯಾಂಟರ್ ಲಾರಿಗಳು ವಾಹನಗಳನ್ನು ಸಾಗಿಸುವ ಲಾರಿಗಳಾಗಿವೆ. ಈ ಕ್ಯಾಂಟರ್ ಗಳಲ್ಲಿ ವಾಹನಗಳು ತುಂಬಿದ್ದವು ಎಂದು ತಿಳಿದು ಬಂದಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next