Advertisement

ಸುಳ್ಯ: ಮನೆಗೆ ತಗಲಿದ ಬೆಂಕಿ; ಮನೆಯೊಳಗೆ ಮಲಗಿದ್ದ ಯಜಮಾನ ಸಜೀವ ದಹನ

09:11 PM Sep 07, 2022 | Team Udayavani |

ಸುಳ್ಯ: ಮನೆಗೆ ಆಕಸ್ಮಿಕವಾಗಿ ಬೆಂಕಿ ತಗಲಿ ಮನೆಯೊಳಗೆ ಮಲಗಿದ್ದ ಯಜಮಾನ ಜೀವಂತ ದಹನವಾಗಿ ಸಾವನ್ನಪ್ಪಿದ ದುರ್ಘ‌ಟನೆ ಸೆ. 7ರಂದು ಬೆಳಗ್ಗೆ ಸುಳ್ಯ ತಾಲೂಕಿನ ಐವರ್ನಾಡಿನಲ್ಲಿ ಸಂಭವಿಸಿದೆ.

Advertisement

ಐವರ್ನಾಡಿನ ಪರ್ಲಿಕಜೆ ಸುಧಾಕರ (47) ಮೃತ ದುರ್ದೈವಿ.

ಸುಧಾಕರ ಅವರು ಬೆಳಗ್ಗೆ ಮನೆಯಲ್ಲಿ ಮಲಗಿದ್ದಾಗ ಘಟನೆ ಸಂಭವಿಸಿದ್ದು, ಪತ್ನಿ ಟ್ಯಾಪಿಂಗ್‌ ಕೆಲಸಕ್ಕೆ ಹೊರ ಹೋಗಿದ್ದರು. ಮಗಳು ಶಾಲೆಗೆ ತೆರಳಿದ್ದಳು. ಈ ವೇಳೆ ಬೆಂಕಿ ಮನೆಯ ಒಂದು ಪಾರ್ಶ್ವಕ್ಕೆ ಬೆಂಕಿ ತಗಲಿತ್ತು. ಸುಧಾಕರ ಅವರು ಸ್ವಲ್ಪ ಅಸೌಖ್ಯದಲ್ಲಿದ್ದರು. ಈ ಹಿನ್ನೆಲೆಯಲ್ಲಿ ಘಟನೆ ವೇಳೆ ಅವರಿಗೆ ಹೊರಗೆ ಓಡಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಪರಿಣಾಮ ಬೆಂಕಿ ಸುಧಾಕರ ಅವರಿಗೂ ತಗಲಿ ಸ್ಥಳದಲ್ಲಿಯೇ ಬೆಂಕಿಯಲ್ಲಿ ದಹಿಸಲ್ಪಟ್ಟರು. ಸೊತ್ತುಗಳೂ ಸುಟ್ಟಿವೆ.

ಮನೆಯೊಳಗೆ ಉರಿಸಿದ್ದ ದೀಪದಿಂದ ಬೆಂಕಿ ಹತ್ತಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದವರು ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ. ಅದಾಗಲೇ ಮನೆಯ ಹೆಚ್ಚಿನ ಭಾಗ ಬೆಂಕಿಗೆ ಆಹುತಿಯಾಗಿದೆ. ಮನೆ ಯಜಮಾನನೂ ಸಜೀವ ದಹನವಾಗಿದ್ದರು. ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next