Advertisement

Theerthahalli: ಆಕಸ್ಮಿಕ ಬೆಂಕಿ ಅವಘಡ; ಮೂವರು ಸಜೀವ ದಹನ…!

09:32 AM Oct 08, 2023 | Kavyashree |

ತೀರ್ಥಹಳ್ಳಿ: ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ ಒಂದೇ ಕುಟುಂಬದ ಮೂವರು ಸಜೀವ ದಹನವಾದ ಮನಕಲಕುವ ಘಟನೆಯೊಂದು ಆ.8ರ ಬೆಳ್ಳಂಬೆಳಿಗ್ಗೆ ತಾಲೂಕಿನ ಮನೆಯೊಂದರಲ್ಲಿ ಸಂಭವಿಸಿದೆ.

Advertisement

ತಾಲೂಕಿನ ಹೊಸನಗರ ರಸ್ತೆಯ ಅರಳಸುರಳಿ ರೈಸ್ ಮಿಲ್ ಸಮೀಪ ಗಣಪತಿ ಕಟ್ಟೆ ಎದುರು ಕಲ್ಲೋಣಿಯ ರಾಘವೇಂದ್ರ. ಕೆ. ಕುಡ ಎಂಬವರ ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು, ಒಂದೇ ಕುಟುಂಬದ ಮೂವರು ಸಜೀವ ದಹನ ಹಾಗೂ ಓರ್ವನ ಸ್ಥಿತಿ ಗಂಭೀರವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ದುರಂತದಲ್ಲಿ ಕುಟುಂಬದ ಹಿರಿಯರಾದ ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆ. ಕುಡ (63), ಪತ್ನಿ ನಾಗರತ್ನ (54), ಹಿರಿಯ ಪುತ್ರ ಶ್ರೀರಾಮ್ (34) ಸಜೀವವಾಗಿ ಬೆಂಕಿಗೆ ಆಹುತಿಯಾಗಿದ್ದಾರೆ ಎಂದು ಸ್ಥಳೀಯರಿಂದ ತಿಳಿದು ಬಂದಿದೆ. ಇನ್ನೋರ್ವ ಪುತ್ರ ಭರತ್ (30) ಗಂಭೀರವಾಗಿ ಗಾಯಗೊಂಡಿದ್ದು ತೀರ್ಥಹಳ್ಳಿಯ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

ಮನೆಯ ಕೋಣೆಯೊಳಗೆ ಕಟ್ಟಿಗೆಗಳನ್ನು ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅರಳಸುರಳಿಯ ಸುತ್ತಮುತ್ತಲಿನ ಗ್ರಾಮಸ್ಥರು ಅಗ್ನಿ ಅವಘಡ ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಈ ಘಟನೆ ಬಗ್ಗೆ ಹೆಚ್ಚಿನ ತನಿಖೆಗಳು ನಡೆಯಬೇಕಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next