Advertisement

ಮಣಿಪಾಲ: ಅಪಘಾತದ ರಭಸಕ್ಕೆ ಧಗಧಗನೇ ಹೊತ್ತಿ ಉರಿದ ಸ್ಕೂಟರ್

04:31 PM Feb 01, 2022 | Team Udayavani |

ಮಣಿಪಾಲ: ಲಾರಿಯೊಂದು ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಅಪ್ಪಳಿಸಿದ ಸ್ಕೂಟರ್ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಹೊತ್ತಿಉರಿದ ಘಟನೆ ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿ ಮಂಗಳವಾರ ಮಧ್ಯಾಹ್ನ ನಡೆದಿದೆ.

Advertisement

ಸ್ಕೂಟರ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

ಉಡುಪಿಯಿಂದ ಡಿಸಿ ಆಫೀಸ್ ಕಡೆಗೆ ಹೋಗುತ್ತಿದ್ದ ಲಾರಿಯೊಂದು ಸೂಜುಕಿ ಆಕ್ಸಿಸ್ ಸ್ಕೂಟರ್ ಗೆ ಢಿಕ್ಕಿಯಾಗಿದೆ. ಇದರಿಂದ ರಸ್ತೆಗೆ ಉರುಳಿದ ಸ್ಕೂಟರ್ ನ ಪೆಟ್ರೋಲ್ ಟ್ಯಾಂಕ್ ಹಾನಿಯಾಗಿ ಸ್ಕೂಟರ್ ಗೆ ಕ್ಷಣಾರ್ಧದಲ್ಲಿ ಬೆಂಕಿ ಹತ್ತಿಕೊಂಡಿದೆ. ನೋಡು ನೋಡುತ್ತಿದ್ದಂತೆ ಸ್ಕೂಟರ್ ಧಗಧಗ ಉರಿದಿದೆ.

ತಕ್ಷಣವೇ ಸಮೀಪದ ಮ್ಯಾಕ್ಸ್ ಬಟ್ಟೆ ಮಳಿಗೆಯ ಸಿಬ್ಬಂದಿ ಬೆಂಕಿ ನಂದಿಸುವ ಸಾಧನ ತಂದು ಸ್ಕೂಟರ್ ಗೆ ಹತ್ತಿಕೊಂಡಿದ್ದ ಬೆಂಕಿ ನಂದಿಸಿದರು. ಇದರಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next