Advertisement

ಬಸ್‌ನಲ್ಲಿ ಬೆಂಕಿ; ಪ್ರಯಾಣಿಕರು ಪಾರು

12:58 PM Aug 16, 2018 | |

ಕೆ.ಆರ್‌.ಪುರ: ತಾಂತ್ರಿಕ ದೋಷದಿಂದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಅಂಬಾರಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಇಡೀ ಬಸ್‌ ಸುಟ್ಟು ಕರಕಲಾಗಿರುವ ಘಟನೆ ಕೆ.ಆರ್‌.ಪುರ ಸಂಚಾರಿ ಠಾಣಾ ವ್ಯಾಪ್ತಿಯ ಐಟಿಐ ತೂಗುಸೇತುವೆ ಬಳಿ ಬುಧವಾರ ನಡೆದಿದೆ.

Advertisement

ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿಯ ಎಸಿ ಸ್ಲಿàಪರ್‌ ಕೋಚ್‌ ಅಂಬಾರಿ ಬಸ್‌ ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಅದೃಷ್ಟವಶಾತ್‌ ಬಸ್‌ನಲ್ಲಿದ್ದ ಸುಮಾರು 20 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರು ಕೇಂದ್ರಿಯ ವಿಭಾಗದ ಶಾಂತಿನಗರ ಡಿಪೋಗೆ ಸೇರಿದ ಬಸ್‌ ಇದಾಗಿದ್ದು, ಮಂಗಳವಾರ ರಾತ್ರಿ ತಿರುಪತಿಯಿಂದ ಹೊರಟು ಬೆಳಗ್ಗೆ 5:15 ರ ಸುಮಾರಿಗೆ ಕೆ.ಆರ್‌.ಪುರ ಬಸ್‌ ನಿಲ್ದಾಣಕ್ಕೆ ಬಂದಿದೆ. ಇಲ್ಲಿಂದ ಹೊರಟ ಬಸ್‌ ಐಟಿಐನ ತೂಗುಸೇತುವೆ ಮೇಲೆ ಹೋಗುವಾಗ ಬಸ್‌ನ ಹಿಂಭಾಗದಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. 

ಇದನ್ನು ಗಮನಿಸಿದ ಚಾಲಕ ಕುಮಾರಸ್ವಾಮಿ ಕೂಡಲೇ ಮಾರ್ಗ ಮಧ್ಯೆಯೇ ಬಸ್‌ ನಿಲ್ಲಿಸಿ ಎಲ್ಲ ಪ್ರಯಾಣಿಕರನ್ನು ಎಚ್ಚರಿಸಿ ಬಸ್‌ನಿಂದ ಕೆಳಗಿಳಿಸಿದ್ದಾರೆ. ಬಳಿಕ ಹತ್ತಿರದ ಮಹದೇವಪುರ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಬೆಂಕಿ ನಂದಿಸಿದ್ದರೂ ವಾಹನ ಬಹುತೇಕ ಸುಟ್ಟು ಕರಕಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next