Advertisement

ಪ್ರತಿಭಟನೆ: ಆರು ವರ್ಷದ ಹಿಂದೆ ಮೃತಪಟ್ಟ ವ್ಯಕ್ತಿಯ ಹೆಸರಲ್ಲಿ ದೂರು; ಪೊಲೀಸರ ಎಡವಟ್ಟು

09:59 AM Jan 04, 2020 | Team Udayavani |

ಲಕ್ನೋ: ಉತ್ತರ ಪ್ರದೇಶದ ಫಿರೋಜಾಬಾದ್‌ ಪೊಲೀಸರಿಗೆ ಅತಿದೊಡ್ಡ ಮುಖಭಂಗವಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯ ಬಳಿಕ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಗೆ ಭಂಗ ತರುವವರ ಪಟ್ಟಿಯೊಂದನ್ನು ಪೊಲೀಸರು ಸಿದ್ಧಪಡಿಸಿದ್ದಾರೆ. ಆ ಪಟ್ಟಿಯಲ್ಲಿ 200 ಮಂದಿಯ ಹೆಸರಿದೆ.

Advertisement

ಅಚ್ಚರಿಯೆಂದರೆ, 6 ವರ್ಷಗಳ ಹಿಂದೆಯೇ ಮೃತಪಟ್ಟಿರುವ ವ್ಯಕ್ತಿ, ಅನಾರೋಗ್ಯ ಪೀಡಿತರಾಗಿ ಹಾಸಿಗೆ ಹಿಡಿದಿರುವ 93ರ ವೃದ್ಧ, 90 ವರ್ಷ ವಯಸ್ಸಿನ ಮತ್ತೋಬ್ಬ ಹಿರಿಯ ವ್ಯಕ್ತಿಯ ಹೆಸರುಗಳೂ ಈ ಪಟ್ಟಿಯಲ್ಲಿವೆ. ಇವರ ಮನೆಗಳಿಗೆ ನೋಟಿಸ್‌ ಹೋಗಿದ್ದು, 10 ಲಕ್ಷ ರೂ. ಬಾಂಡ್‌ಗೆ ಸಹಿ ಮಾಡುವಂತೆ, ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.

58 ಮಂದಿಗೆ ಜಾಮೀನು: ಸಿಎಎ ವಿರುದ್ಧ ಪ್ರತಿಭಟಿಸಿ ಬಂಧನಕ್ಕೊಳಗಾಗಿದ್ದ 58 ಮಂದಿಗೆ ಉತ್ತರ ಪ್ರದೇಶದ ಕೋರ್ಟ್‌ ಜಾಮೀನು ನೀಡಿದ್ದು, ಗುರುವಾರ ಅವರು ಬಿಡುಗಡೆಗೊಂಡಿದ್ದಾರೆ. ಈ ಪೈಕಿ ಎನ್‌ಜಿಒವೊಂದನ್ನು ನಡೆಸುತ್ತಿರುವ ಏಕ್ತಾ ಮತ್ತು ರವಿಶೇಖರ್‌ ದಂಪತಿಯೂ ಸೇರಿದ್ದು, ಇವರು ತಮ್ಮ 14 ತಿಂಗಳ ಕೂಸನ್ನು ಮತ್ತೆ ಸೇರಿದ್ದಾರೆ. ಹೆತ್ತವರ ಬಂಧನದಿಂದಾಗಿ ಕೂಸು ಏಕಾಂಗಿಯಗಿದ್ದರ ಕುರಿತು ಭಾರೀ ಸುದ್ದಿಯಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next