Advertisement

ಮೊದಲ ದಿನ 11 ನಾಮಪತ್ರ

01:39 AM Mar 20, 2019 | Team Udayavani |

ಬೆಂಗಳೂರು: ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸುವಪ್ರಕ್ರಿಯೆ ಮಂಗಳವಾರ ಆರಂಭಗೊಂಡಿದ್ದು, ಮೊದಲ ದಿನ ರಾಜ್ಯದ ನಾಲ್ಕು ಲೋಕಸಭಾ ಕ್ಷೇತ್ರಗಳಲ್ಲಿ 6 ಮಂದಿ ಅಭ್ಯರ್ಥಿಗಳು 11 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

Advertisement

ಮೊದಲ ಹಂತದಲ್ಲಿ ಏ.18ರಂದು ಮತದಾನ ನಡೆಯಲಿರುವ ದಕ್ಷಿಣ ಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಗಳವಾರ ದಕ್ಷಿಣ ಕನ್ನಡದಲ್ಲಿ ಒಬ್ಬ ಅಭ್ಯರ್ಥಿಯಿಂದ 1 ನಾಮಪತ್ರ, ಮಂಡ್ಯ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ 3 ಪ್ರತ್ಯೇಕ ಪಕ್ಷಗಳಿಂದ ಮೂರು ನಾಮಪತ್ರ, ಮೈಸೂರು ಕ್ಷೇತ್ರದಿಂದ ಮೂವರು ಅಭ್ಯರ್ಥಿಗಳು ಆರು ನಾಮಪತ್ರ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಒಬ್ಬ ಪಕ್ಷೇತರ ಅಭ್ಯರ್ಥಿ ಒಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ಮಾ.26 ಕೊನೇ ದಿನಾಂಕವಾಗಿದ್ದು, ಮಾ.27ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ
ವಾಪಸ್‌ ಪಡೆದುಕೊಳ್ಳಲು ಮಾ.29 ಕೊನೇ ದಿನವಾಗಿದ್ದು, ಏ.18ರಂದು ಮತದಾನ ನಡೆಯಲಿದೆ ಎಂದು ಮುಖ್ಯ
ಚುನಾವಣಾಧಿಕಾರಿ ಸಂಜೀವ ಕುಮಾರ್‌ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next