Advertisement

ಮೊದಲ ಏಕದಿನ: ಟಾಸ್ ಗೆದ್ದ ಇಂಗ್ಲೆಂಡ್, ಟೀಂ ಇಂಡಿಯಾದಲ್ಲಿ ಇಬ್ಬರು ಹೊಸಮುಖ

01:19 PM Mar 23, 2021 | Team Udayavani |

ಪುಣೆ: ಟೆಸ್ಟ್ ಮತ್ತು ಟಿ20 ಸರಣಿಯ ಬಳಿಕ ಇಂಗ್ಲೆಂಡ್ ಮತ್ತು ಭಾರತ ತಂಡಗಳು ಏಕದಿನ ಸರಣಿಗೆ ಸಜ್ಜಾಗಿದೆ. ಪುಣೆಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಇಂಗ್ಲೆಂಡ್ ನಾಯಕ ಇಯಾನ್ ಮಾರ್ಗನ್ ಟಾಸ್ ಗೆದ್ದುಕೊಂಡಿದ್ದು, ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

Advertisement

ಟೀಂ ಇಂಡಿಯಾದಲ್ಲಿ ಇಂದು ಇಬ್ಬರು ಪದಾರ್ಪಣೆ ಮಾಡಿದ್ದಾರೆ. ಕನ್ನಡಿಗ ಪ್ರಸಿದ್ ಕೃಷ್ಣ ಮತ್ತು ಕೃನಾಲ್ ಪಾಂಡ್ಯ ಇಂದು ಏಕದಿನ ಕ್ರಿಕೆಟಿಗ ಪದಾರ್ಪಣೆ ಮಾಡಿದ್ದಾರೆ.

ಇದನ್ನೂ ಓದಿ:ದಯವಿಟ್ಟು ನಮ್ಮ ಮಗುವಿನ ಫೋಟೋ ತೆಗೆಯಬೇಡಿ : ವಿರಾಟ್ -ಅನುಷ್ಕಾ ಜೋಡಿ

ಶಿಖರ್ ಧವನ್ ಮತ್ತು ರೋಹಿತ್ ಆರಂಭಿಕರಾಗಿದ್ದು, ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್, ವಿಕೆಟ್ ಕೀಪಿಂಗ್ ಜವಾಬ್ದಾರಿ ಹೊತ್ತಿರುವ ಕೆ.ಎಲ್ ರಾಹುಲ್ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸಲಿದ್ದಾರೆ.

ತಂಡಗಳು:

Advertisement

ಭಾರತ: ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ (ನಾ), ಶ್ರೇಯಾಸ್ ಅಯ್ಯರ್, ಕೆ.ಎಲ್. ರಾಹುಲ್ (ವಿ.ಕೀ), ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಶಾರ್ದುಲ್ ಠಾಕೂರ್, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ಪ್ರಸಿದ್ ಕೃಷ್ಣ.

ಇಂಗ್ಲೆಂಡ್ : ಜೇಸನ್ ರಾಯ್, ಜಾನಿ ಬೈರ್‌ಸ್ಟೋವ್, ಇಯೊನ್ ಮೋರ್ಗಾನ್ (ನಾ), ಜೋಸ್ ಬಟ್ಲರ್ (ವಿ.ಕೀ), ಬೆನ್ ಸ್ಟೋಕ್ಸ್, ಸ್ಯಾಮ್ ಬಿಲ್ಲಿಂಗ್ಸ್, ಮೊಯೀನ್ ಅಲಿ, ಸ್ಯಾಮ್ ಕುರ್ರನ್, ಟಾಮ್ ಕುರ್ರನ್, ಆದಿಲ್ ರಶೀದ್, ಮಾರ್ಕ್ ವುಡ್

Advertisement

Udayavani is now on Telegram. Click here to join our channel and stay updated with the latest news.

Next