Advertisement

Bantwal ವರ್ಷದ ಮೊದಲ ಮಳೆ; ಕುದ್ರೆಬೆಟ್ಟು ಹೆದ್ದಾರಿಯಲ್ಲಿ ಕಾರು ಪಲ್ಟಿ

12:57 AM May 13, 2024 | Team Udayavani |

ಬಂಟ್ವಾಳ: ಬಿ.ಸಿ.ರೋಡು – ಅಡ್ಡಹೊಳೆ ಹೆದ್ದಾರಿ ಅವಾಂತರ ಮುಂದುವರಿದಿದ್ದು, ರವಿವಾರ ಸಂಜೆ ಸುರಿದ ಮೊದಲ ಮಳೆಗೇ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಘಟನೆ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟಿನಲ್ಲಿ ನಡೆದಿದೆ.

Advertisement

ಮಳೆಯಿಂದಾಗಿ ಹೆದ್ದಾರಿಯಲ್ಲಿ ನೀರು ನಿಂತಿದ್ದು, ಈ ವೇಳೆ ವೇಗವಾಗಿ ಬಂದ ಟಾಟಾ ನ್ಯಾನೋ ಕಾರು ನೀರಿನಲ್ಲಿ ಸಂಚರಿಸಿ ಹೆದ್ದಾರಿ ಮಧ್ಯದ ಡಿವೈಡರ್‌ಗೆ ಢಿಕ್ಕಿಯಾಗಿ ಪಲ್ಟಿಯಾಗಿದೆ. ಕಾರಿನಲ್ಲಿ ಚಾಲಕ ತೌಸೀಫ್‌ ಮಾತ್ರ ಇದ್ದು, ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಹೆದ್ದಾರಿಯಲ್ಲಿ ಅಲ್ಲಲ್ಲಿ ನೀರು ನಿಲ್ಲುತ್ತಿದ್ದು, ಇದು ದ್ವಿಚಕ್ರ ವಾಹನಗಳು ಹಾಗೂ ಸಣ್ಣ ವಾಹನಗಳಿಗೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ. ಕಲ್ಲಡ್ಕದಲ್ಲಿ ಇನ್ನೂ ಕೂಡ ಸರ್ವೀಸ್‌ ರಸ್ತೆಗೆ ಡಾಮರು ಹಾಕದೇ ಇರುವುದರಿಂದ ವಾಹನಗಳಿಗೆ ಸಂಕಷ್ಟ ಎದುರಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next