Advertisement

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

01:04 AM Sep 21, 2024 | Team Udayavani |

ಲಕ್ನೋ: ಅಯೋಧ್ಯೆಯ ಧನ್ನಿಪುರ ಮಸೀದಿ ನಿರ್ಮಾಣದ ಮೇಲ್ವಿಚಾರಣೆಗೆ ಸುನ್ನಿ ಸೆಂಟ್ರಲ್‌ ವಕ್ಫ್ ಮಂಡಳಿ ಸ್ಥಾಪನೆ ಮಾಡಿದ್ದ ಇಂಡೋ-ಇಸ್ಲಾಮಿಕ್‌ ಕಲ್ಚರಲ್‌ ಫೌಂಡೇಶನ್‌(ಐಐಸಿಎಫ್), ಮಸೀದಿ ಅಭಿವೃದ್ಧಿಗೆ ಸ್ಥಾಪಿಸಲಾಗಿದ್ದ ಸಮಿತಿ ಸೇರಿ 4 ಸಮಿತಿ ಗಳನ್ನು ವಿಸರ್ಜಿಸಿದೆ. ಹಣಕಾಸಿನ ಬಿಕ್ಕಟ್ಟು ಎದುರಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Advertisement

ಲಕ್ನೋ ದಲ್ಲಿ ಸುನ್ನಿ ಸೆಂಟ್ರಲ್‌ ವಕ್ಫ್ ಮಂಡಳಿ ಅಧ್ಯಕ್ಷ ಝುಫ‌ರ್‌ ಫಾರೂಕಿ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಐಐಸಿಎಫ್ ಈಗ ವಿದೇಶಿ ಕೊಡುಗೆ (ನಿಯಂತ್ರಣ)ಕಾಯ್ದೆ ಅಡಿಯಲ್ಲಿ ಕಡ್ಡಾಯ ಅನುಮತಿಗಳನ್ನು ಪಡೆಯುವ ಪ್ರಕ್ರಿಯೆಯನ್ನು ವೇಗಗೊಳಿಸುವತ್ತ ಗಮನ ಹರಿಸುತ್ತಿದೆ. ಈ ಪ್ರಕ್ರಿಯೆಗಳು ಪೂರ್ಣಗೊಂಡರೆ ಸಾಗರೋತ್ತರ ಸಮುದಾಯ ದಿಂದ ದೇಣಿಗೆ ಪಡೆಯಲು ಸಾಧ್ಯವಾಗುತ್ತದೆ.

Advertisement

Udayavani is now on Telegram. Click here to join our channel and stay updated with the latest news.

Next