Advertisement

Fisherman: ಮೀನುಗಾರಿಕೆ ವೇಳೆ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

09:36 PM Mar 14, 2024 | Team Udayavani |

ಕಾಪು: ಸಮುದ್ರದಲ್ಲಿ ಮೀನುಗಾರಿಕೆ ವೇಳೆ ಆಕಸ್ಮಿಕವಾಗಿ ಬೋಟ್‌ನಿಂದ ನೀರಿಗೆ ಬಿದ್ದು ಮೀನುಗಾರ ಮೃತಪಟ್ಟ ಘಟನೆ ಉಳಿಯಾರಗೋಳಿ ಗ್ರಾಮದ ಪೊಲಿಪು ಬಳಿ ಬುಧವಾರ ರಾತ್ರಿ ನಡೆದಿದೆ.

Advertisement

ಉದ್ಯಾವರ ಪಿತ್ರೋಡಿ ನಿವಾಸಿ ರಾಮಾಜು ಕೋಟ್ಯಾನ್‌ (54) ಮೃತ ಮೀನುಗಾರ.

ರಾಮಾಜು ಇತರ ನಾಲ್ವರೊಂದಿಗೆ ಬುಧವಾರ ರಾತ್ರಿ ಮೀನು ಹಿಡಿಯುತ್ತಿರುವಾಗ ಬಲೆಯನ್ನು ಮೇಲಕ್ಕೆ ಎಳೆಯುತ್ತಿದ್ದ ವೇಳೆ ನೀರಿಗೆ ಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ತತ್‌ಕ್ಷಣ ಮೇಲಕ್ಕೆತ್ತಿ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಯಿತಾದರೂ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ಘೋಷಿಸಿದರು. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next