Advertisement

Kapu ದೋಣಿಯ ವಾಡಿ ಮೇಲೆ ಬಿದ್ದು ಮೀನುಗಾರ ಸಾವು

12:39 AM Jun 01, 2024 | Team Udayavani |

ಕಾಪು: ಹೊಳೆಯಲ್ಲಿ ಬಲೆ ಬೀಸುತ್ತಿದ್ದಾಗ ದೋಣಿಯ ವಾಡಿ ಮೇಲೆ ಬಿದ್ದು ಮೀನುಗಾರ ಮೃತಪಟ್ಟ ಘಟನೆ ಮೇ 30ರಂದು ಉದ್ಯಾವರ ಪಿತ್ರೋಡಿಯಲ್ಲಿ ನಡೆದಿದೆ.

Advertisement

ಪಿತ್ರೋಡಿಯ ವಾಸು ಅವರಿಗೆ ಸೇರಿದ ದೋಣಿಯಲ್ಲಿ ಪಿತ್ರೋಡಿ ಪಾಪನಾಶಿನಿ ಹೊಳೆಯಲ್ಲಿ ಮೀನು ಹಿಡಿಯಲೆಂದು ತೆರಳಿದ್ದ ಉದ್ಯಾವರ ನಿವಾಸಿ ಅನಿಲ್‌ (46) ಮೃತ‌ ಮೀನುಗಾರ.

ಹೊಳೆಯಲ್ಲಿ ಬಲೆ ಬೀಸುತ್ತಿದ್ದಾಗ ಆಯತಪ್ಪಿ ದೋಣಿಯೊಳಗೆ ಅಳವಡಿಸಿರುವ ವಾಡಿ ಮೇಲೆ ತಲೆಕೆಳಗಾಗಿ ಬಿದ್ದು ಗಂಭೀರ ಗಾಯಗೊಂಡಿದ್ದು,ಅವರ ಜತೆಗಿದ್ದ ಭರತೇಶ್‌ ಅನಿಲ್‌ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಗಾಯಾಳು ಮೃತಪಟ್ಟಿರುವುದಾಗಿ ತಿಳಿಸಿದ್ದರು. ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next