Advertisement

ಮಂಗಳೂರು ಆಳಸಮುದ್ರದಲ್ಲಿ ಮೀನುಗಾರಿಕಾ ಬೋಟ್ ದುರಂತ: ಮೂವರು ಸಾವು, 6 ಮಂದಿ ನಾಪತ್ತೆ

01:28 PM Apr 13, 2021 | Team Udayavani |

ಮಂಗಳೂರು: ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲ್ ದೂರದಲ್ಲಿ ಮೀನುಗಾರಿಕಾ ಬೋಟ್ ಅಪಘಾತವಾಗಿ ಮೂವರು ಸಾವನ್ನಪ್ಪಿ, ಆರು ಮಂದಿ ಮೀನುಗಾರರು ನಾಪತ್ತೆಯಾದ ಘಟನೆ ಮಂಗಳವಾರ ವರದಿಯಾಗಿದೆ. ಘಟನೆಯಲ್ಲಿ ಐವರು ಮೀನುಗಾರರನ್ನು ರಕ್ಷಿಸಲಾಗಿದೆ.

Advertisement

ಈ ಬಗ್ಗೆ ಭಾರತೀಯ ಕೋಸ್ಟ್ ಗಾರ್ಡ್ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ನೀಡಲಾಗಿದ್ದು, ಕರಾವಳಿ ಪಡೆಯ ಮೂರು ಹಡಗು ಮತ್ತು ಏರ್ ಕ್ರಾಫ್ಟ್ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ:ರೈಲಿನಲ್ಲಿ ಪ್ರಯಾಣಿಸಲು ಯೋಜಿಸುತ್ತಿದ್ದೀರಾ.? ಭಾರತೀಯ ರೈಲ್ವೆಯ ಕೋವಿಡ್ ಗೈಡ್ಲೈನ್ಸ್ ಗಮನಿಸಿ

ಮೀನುಗಾರಿಕಾ ಬೋಟ್ ಕೇರಳದ ಕೋಝಿಕೋಡ್ ಜಿಲ್ಲೆಯ ಬೇಪೋರ್ ನಿಂದ ಹೊರಟಿತ್ತು. ಇದರಲ್ಲಿ ತಮಿಳುನಾಡು ಮತ್ತು ಬಂಗಾಳ ಮೂಲದ ಕಾರ್ಮಿಕರಿದ್ದರು ಎನ್ನಲಾಗಿದೆ.

ಇದನ್ನೂ ಓದಿ:ಮಂಗಳೂರಿನಲ್ಲಿ ಇಳಿಯಬೇಕಿದ್ದ ವಿಮಾನ ಕೊಚ್ಚಿಯಲ್ಲಿ ಲ್ಯಾಂಡ್: ಪರದಾಡಿದ ಪ್ರಯಾಣಿಕರು!

Advertisement
Advertisement

Udayavani is now on Telegram. Click here to join our channel and stay updated with the latest news.

Next