Advertisement

ಜೂ.1 ರಿಂದ ಮೀನುಗಾರಿಕೆ ನಿಷೇಧ : ರಾಜ್ಯ ಸರಕಾರದ ಅಧಿಸೂಚನೆ

08:16 PM May 24, 2021 | Team Udayavani |

ಉಡುಪಿ : ರಾಜ್ಯ ಸರಕಾರದ ಅಧಿಸೂಚನೆಯಂತೆ ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಎಚ್‌.ಪಿ.) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್‌ ಅಥವಾ ಔಟ್‌ಬೋರ್ಡ್‌ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂ.1 ರಿಂದ ಜು.31 ರ ವರೆಗೆ ಒಟ್ಟು 61 ದಿನಗಳ ನಿಷೇಧವನ್ನು ಹೇರಿ ಆದೇಶವನ್ನು ಹೊರಡಿಸಿಸಲಾಗಿದೆ.

Advertisement

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ/ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿರುತ್ತದೆ.
ಕೇಂದ್ರ ಕೃಷಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವಾಲಯದ ಆದೇಶದಂತೆ ರಾಜ್ಯವೂ ಸೇರಿದಂತೆ ಪಶ್ಚಿಮ ಕರಾವಳಿಯ ಎಲ್ಲ ರಾಜ್ಯಗಳ ವಿಶೇಷ ಆರ್ಥಿಕ ವಲಯದ (12 ರಿಂದ 200 ನಾಟಿಕಲ್‌ ಮೈಲಿ) ಜಲಪ್ರದೇಶದಲ್ಲಿ ಜೂ.1 ರಿಂದ ಜು.31 ರವರೆಗೆ ಒಟ್ಟು 61 ದಿನಗಳ ಮೀನುಗಾರಿಕೆ ನಿಷೇಧವನ್ನು ಹೇರಿ ಏಕ ರೂಪದ ಮೀನುಗಾರಿಕೆ ನಿಷೇಧನ್ನು ಜಾರಿಗೊಳಿಸಲಾಗಿರುತ್ತದೆ.

ಇದನ್ನೂ ಓದಿ :ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಸ್ಮಾರ್ಟ್‌ಫೋನ್‌ ವಿತರಣೆಗೆ ಚಿಂತನೆ

ಸರಕಾರದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು, ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ ಒಂದು ವರ್ಷದ ಅವಧಿಗೆ ಡೀಸೆಲ್‌ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ.

ಎಲ್ಲ ಮೀನುಗಾರರು ಈ ಆದೇಶವನ್ನು ಪಾಲಿಸಿ ಸಹಕರಿಸುವಂತೆ ಮೀನುಗಾರಿಕಾ ಇಲಾಖೆಯ ಹಿರಿಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next