Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಮಂದಿ ಕೋವಿಡ್ ಸೋಂಕಿತರು ಗುಣಮುಖರಾಗಿ ಬಿಡುಗಡೆ

01:42 PM May 23, 2020 | keerthan |

ಮಂಗಳೂರು: ಇಲ್ಲಿನ ಕೋವಿಡ್ ಆಸ್ಪತ್ರೆಯಿಂದ ಐವರು ಸೋಂಕಿತರು ಗುಣಮುಖರಾಗಿ ಇಂದು ಬಿಡುಗಡೆಯಾಗಿದ್ದಾರೆ. ಬಂಟ್ವಾಳದ ಮೂವರು ಮತ್ತು ಮಂಗಳೂರೂ ಬೊಳೂರಿನ ಇಬ್ಬರು ಸೋಂಕಿತ ಗುಣಮುಖರಾಗಿದ್ದು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Advertisement

ಇಂದು ಮೂವರು ಬಂಟ್ವಾಳದ ಸೋಂಕಿತರು ಬಿಡುಗಡೆಯಾಗಿದ್ದಾರೆ. ಈ ಮೂಲಕ ಜಿಲ್ಲೆಯ ಅತೀ ದೊಡ್ಡ ಕೋವಿಡ್-19 ಹಾಟ್ ಸ್ಪಾಟ್ ಆಗಿದ್ದ ಬಂಟ್ವಾಳ ಈಗ ಸೋಂಕು ಮುಕ್ತವಾಗಿದೆ.  ದ.ಕ‌ ಜಿಲ್ಲಾಡಳಿತವು ಇಂದು ಡಿಸ್ಚಾರ್ಜ್ ಆದ ರೋಗಿಗಳನ್ನು ಬೀಳ್ಕೊಟ್ಟಿದೆ

ಸದ್ಯ ಮಂಗಳೂರು ಕೋವಿಡ್ ಆಸ್ಪತ್ರೆ ಯಲ್ಲಿ 31 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂರು ಮಂದಿ ರೋಗಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಎಲ್ಲಾ ಕೋವಿಡ್-19 ಸೋಂಕಿತ ರೋಗಿಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೆನ್ಲಾಕ್ ಆಸ್ಪತ್ರೆ ಯ ಅಧೀಕ್ಷಕ ಡಾ.ಸದಾಶಿವ ಶಾನುಭೋಗ ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next